ಮುಷ್ಟೂರು ಗ್ರಾಮದ ಹಳ್ಳದ ಸೇತುವೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವ ಕಾರಣ ಗ್ರಾಮಸ್ಥರು ರಂಗದಾಳ, ಬುದ್ದಿನ್ನಿ ಮೂಲಕ ಮಾನ್ವಿಗೆ ಸಂಚರಿಸಬೇಕಿದೆ. ಸಿರವಾರದಲ್ಲಿ ಬಹುತೇಕ ವಾರ್ಡ್ಗಳಲ್ಲಿ ಮನೆಗಳಿಗೆ ನೀರು ನುಗ್ಗಿ, ಜನರು ತೊಂದರೆ ಅನುಭವಿಸಿದರು.ನುಗಡೋಣಿ ಹೊಸೂರು ಗ್ರಾಮ ಸಮೀಪದ ಹಳ್ಳ ತುಂಬಿ ಹರಿದ ಪರಿಣಾಮ ಹಳ್ಳದ ದಂಡೆಯ ಪಕ್ಕದ ಜಮೀನುಗಳಿಗೆ ನೀರು ನುಗ್ಗಿ 70 ಎಕರೆ ಜಮೀನಿನಲ್ಲಿ ನಾಟಿ ಮಾಡಿದ್ದ ಭತ್ತದ ಸಸಿಗಳು ಕೊಚ್ಚಿಹೋಗಿವೆ.