ಹಿರಿಯೂರು, ಚಿತ್ರದುರ್ಗ, ಹಾಸನ, ತುಮಕೂರು, ದಾವಣಗೆರೆ ಭಾಗದಲ್ಲಿ ಜೊತೆಗೆ ಬೀದರ್ ಜಿಲ್ಲೆಯಲ್ಲೂ ಕಲ್ಪತರು ತಳಿ ಬೆಳೆಯಲು ರೈತರು ಮುಂದಾಗಿದ್ದಾರೆ. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಸಹಯೋಗದಲ್ಲಿ ಅರಸೀಕೆರೆ ಸಂಶೋಧನಾ ಕೇಂದ್ರದಲ್ಲಿ ಕಲ್ಪತರು ತಳಿ ಸಸಿಗಳ ಉತ್ಪಾದನೆ ಹಾಗೂ ರೈತರಿಗೆ ತಾಂತ್ರಿಕ ನೆರವು ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಆಸಕ್ತ ರೈತರಿಗೆ ಜೂನ್ ತಿಂಗಳಲ್ಲಿ ಸಸಿ ನೀಡಲಾಗುವುದು ಎಂದು ಸಿದ್ದಪ್ಪ ಹೇಳುತ್ತಾರೆ. ಅವರ ಸಂಪರ್ಕ ಸಂಖ್ಯೆ: 9886821599.