ಶ್ರೀನಿವಾಸ್ ಗೌಡರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ‘ನಮ್ಮ ಗ್ರಾಮೀಣ ಪ್ರತಿಭೆಗಳು ಕಡಿಮೆ ಇಲ್ಲ ಎಂಬುದಕ್ಕೆ ಇದು ಸಾಕ್ಷಿ. ವಿಶ್ವಮಟ್ಟದ ದಾಖಲೆಯ ಪ್ರದರ್ಶನ ನೀಡಿದ ಕಂಬಳದ ವೇಗದ ಓಟಗಾರ ಶ್ರೀನಿವಾಸ್ ಗೌಡರಿಗೆ ಹಾರ್ದಿಕ ಅಭಿನಂದನೆಗಳು. ಈ ಪ್ರತಿಭೆಯನ್ನು ವಿಶ್ವಸ್ತರಕ್ಕೆ ಬೆಳೆಸುವ ನಿಟ್ಟಿನಲ್ಲಿ ಸರ್ಕಾರದ ಪ್ರೋತ್ಸಾಹ ಇರಲಿದೆ’ ಎಂದಿದ್ದಾರೆ.