ರಾಮನಗರ: ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ಪ್ರಕರಣದ ಆರೋಪಿ, ಕಂಪ್ಲಿ ಶಾಸಕ ಜೆ.ಎನ್.ಗಣೇಶ್ರನ್ನು ಇಲ್ಲಿನ ಬಿಡದಿ ಠಾಣೆಯಲ್ಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಳಿಗ್ಗೆ 11.15ಕ್ಕೆ ಆರೋಪಿಯನ್ನು ಠಾಣೆಗೆ ಕರೆತರಲಾಯಿತು. ಇನ್ನೂ ವಿಚಾರಣೆ ಮುಂದುವರಿದಿದೆ.
ಆರೋಪಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಮಧ್ಯಾಹ್ನ ಮುಖ್ಯ ಜ್ಯುಡಿಷಿಯಲ್ ನ್ಯಾಯಾಧೀಶೆ ಅನಿತಾ ಅವರ ಮುಂದೆ ಹಾಜರುಪಡಿಸಲಾಗುವುದು. ಮತ್ತೊಂದೆಡೆ, ಆರೋಪಿ ಪರ ವಕೀಲರು ಜಾಮೀನಿಗೆ ಅರ್ಜಿ ಹಾಕಲು ಸಿದ್ಧತೆ ನಡೆಸಿದ್ದಾರೆ.
ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿ ಗಣೇಶ್ ಒಂದು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದರು.
ಗುಜರಾತ್ನ ದೇವಸ್ಥಾನಕ್ಕೆ ಹೋಗಿದ್ದ ಗಣೇಶ್, ಸೋಮನಾಥ ಪಟ್ಟಣದಲ್ಲಿ ಊಟ ಮಾಡಲು ಇಳಿದಿದ್ದರು. ಆಗ ರಾಮನಗರ ಪೊಲೀಸರ ತಂಡ ಆರೋಪಿಯನ್ನು ವಶಕ್ಕೆ ಪಡೆದು ಗುರುವಾರ ಬೆಳಿಗ್ಗೆ ಬೆಂಗಳೂರಿಗೆ ಕರೆತಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.