<p><strong>ಮೈಸೂರು: ‘</strong>ನಮ್ಮ ಬಹುಪಾಲು ರಾಜಕಾರಣಿಗಳಿಗೆ ಕನ್ನಡ ಭಾಷೆಯ ಕುರಿತು ಯಾವ ಅಭಿಮಾನವೂ ಇಲ್ಲ’ ಎಂದು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಬೇಸರ ವ್ಯಕ್ತಪಡಿಸಿದರು.</p>.<p>ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ವತಿಯಿಂದ ಭಾನುವಾರ ಇಲ್ಲಿ ನಡೆದ ‘ಕನ್ನಡ ಬದುಕಿನ ಸಬಲೀಕರಣ ಸವಾಲುಗಳು ಮತ್ತು ಸಾಧ್ಯತೆಗಳು’ ಕುರಿತ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಮಿಳುನಾಡಿನ ಪ್ರತಿಯೊಬ್ಬ ರಾಜಕಾರಣಿಯೂ ಅವರ ಮಾತೃಭಾಷೆಯ ಬಗ್ಗೆ ಅಪಾರವಾದ ಬದ್ಧತೆ ಹೊಂದಿದ್ದಾರೆ. ಹೀಗಾಗಿಯೇ, ಅಲ್ಲಿ ತಮಿಳು ಬೆಳೆಯುತ್ತಿದೆ. ಇಲ್ಲಿ ಕನ್ನಡ ನೆಲಕಚ್ಚುತ್ತಿದೆ ಎಂದು ಕಿಡಿಕಾರಿದರು.</p>.<p>‘ನಾವು ಬೇರೆ ರಾಜ್ಯದಿಂದ ಬಂದವರ ಜತೆ ಅವರ ಭಾಷೆ ಕಲಿತು ಮಾತನಾಡುತ್ತೇವೆ. ಅದೇ ನಮ್ಮ ಭಾಷೆಯನ್ನು ಅವರಿಗೆ ಕಲಿಸಲು ಹೋಗುವುದಿಲ್ಲ. ಹೀಗಾದರೆ, ಭಾಷೆ ಬೆಳೆಯುವುದಿಲ್ಲ’ ಎಂದರು.</p>.<p>‘ಹೊಸ ಜ್ಞಾನವನ್ನು ನಾವು ಇಂಗ್ಲಿಷ್ನಿಂದ ಕಲಿಯುತ್ತೇವೆ. ಹಾಗಾದರೆ, ಕನ್ನಡ ಹೇಗೆ ತಾನೆ ಬೆಳೆಯುತ್ತದೆ’ ಎಂದು ಪ್ರಶ್ನಿಸಿದ ಅವರು ‘ಎಲ್ಲ ಜ್ಞಾನಶಾಖೆಗಳ ಜ್ಞಾನವು ಕನ್ನಡದಲ್ಲೇ ಇದ್ದಾಗ, ಕನ್ನಡದಲ್ಲೇ ಕಲಿತಾಗ ಮಾತ್ರ ಕನ್ನಡ ಬೆಳೆಯುತ್ತದೆ’ ಎಂದು ಹೇಳಿದರು.</p>.<p>ಎಲ್ಲ ವಿದ್ಯಾರ್ಥಿಗಳಿಗೂ ವಾರದಲ್ಲಿ ಒಂದು ತರಗತಿಯನ್ನು ಕನ್ನಡ ಭಾಷೆಯ ಪ್ರಾಚೀನತೆ ಹಾಗೂ ಶ್ರೀಮಂತಿಕೆಯನ್ನು ಕುರಿತು ಹೇಳುವುದಕ್ಕೆಂದೇ ಇಡಬೇಕು. ಆಗ ಇಂದಿನ ತಲೆಮಾರು ಕನ್ನಡದ ಕುರಿತು ಅಭಿಮಾನ ತಳೆಯುತ್ತದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ನಮ್ಮ ಬಹುಪಾಲು ರಾಜಕಾರಣಿಗಳಿಗೆ ಕನ್ನಡ ಭಾಷೆಯ ಕುರಿತು ಯಾವ ಅಭಿಮಾನವೂ ಇಲ್ಲ’ ಎಂದು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಬೇಸರ ವ್ಯಕ್ತಪಡಿಸಿದರು.</p>.<p>ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ವತಿಯಿಂದ ಭಾನುವಾರ ಇಲ್ಲಿ ನಡೆದ ‘ಕನ್ನಡ ಬದುಕಿನ ಸಬಲೀಕರಣ ಸವಾಲುಗಳು ಮತ್ತು ಸಾಧ್ಯತೆಗಳು’ ಕುರಿತ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಮಿಳುನಾಡಿನ ಪ್ರತಿಯೊಬ್ಬ ರಾಜಕಾರಣಿಯೂ ಅವರ ಮಾತೃಭಾಷೆಯ ಬಗ್ಗೆ ಅಪಾರವಾದ ಬದ್ಧತೆ ಹೊಂದಿದ್ದಾರೆ. ಹೀಗಾಗಿಯೇ, ಅಲ್ಲಿ ತಮಿಳು ಬೆಳೆಯುತ್ತಿದೆ. ಇಲ್ಲಿ ಕನ್ನಡ ನೆಲಕಚ್ಚುತ್ತಿದೆ ಎಂದು ಕಿಡಿಕಾರಿದರು.</p>.<p>‘ನಾವು ಬೇರೆ ರಾಜ್ಯದಿಂದ ಬಂದವರ ಜತೆ ಅವರ ಭಾಷೆ ಕಲಿತು ಮಾತನಾಡುತ್ತೇವೆ. ಅದೇ ನಮ್ಮ ಭಾಷೆಯನ್ನು ಅವರಿಗೆ ಕಲಿಸಲು ಹೋಗುವುದಿಲ್ಲ. ಹೀಗಾದರೆ, ಭಾಷೆ ಬೆಳೆಯುವುದಿಲ್ಲ’ ಎಂದರು.</p>.<p>‘ಹೊಸ ಜ್ಞಾನವನ್ನು ನಾವು ಇಂಗ್ಲಿಷ್ನಿಂದ ಕಲಿಯುತ್ತೇವೆ. ಹಾಗಾದರೆ, ಕನ್ನಡ ಹೇಗೆ ತಾನೆ ಬೆಳೆಯುತ್ತದೆ’ ಎಂದು ಪ್ರಶ್ನಿಸಿದ ಅವರು ‘ಎಲ್ಲ ಜ್ಞಾನಶಾಖೆಗಳ ಜ್ಞಾನವು ಕನ್ನಡದಲ್ಲೇ ಇದ್ದಾಗ, ಕನ್ನಡದಲ್ಲೇ ಕಲಿತಾಗ ಮಾತ್ರ ಕನ್ನಡ ಬೆಳೆಯುತ್ತದೆ’ ಎಂದು ಹೇಳಿದರು.</p>.<p>ಎಲ್ಲ ವಿದ್ಯಾರ್ಥಿಗಳಿಗೂ ವಾರದಲ್ಲಿ ಒಂದು ತರಗತಿಯನ್ನು ಕನ್ನಡ ಭಾಷೆಯ ಪ್ರಾಚೀನತೆ ಹಾಗೂ ಶ್ರೀಮಂತಿಕೆಯನ್ನು ಕುರಿತು ಹೇಳುವುದಕ್ಕೆಂದೇ ಇಡಬೇಕು. ಆಗ ಇಂದಿನ ತಲೆಮಾರು ಕನ್ನಡದ ಕುರಿತು ಅಭಿಮಾನ ತಳೆಯುತ್ತದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>