ಚಿಕ್ಕಮಗಳೂರು: ‘ಮೈಸೂರು ವಿಶ್ವವಿದ್ಯಾಲಯದ ಐದು ಎಕರೆ ಜಾಗದಲ್ಲಿ ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರ ಸ್ಥಾಪಿಸಲು ತೀರ್ಮಾನಿಸಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದರು.
‘ಮೈಸೂರು ವಿ.ವಿ ಕಟ್ಟಡವೊಂದರಲ್ಲಿ ಸದ್ಯಕ್ಕೆ ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರ ಆರಂಭಿಸುವ, ಕೇಂದ್ರ ಸರ್ಕಾರ ನೀಡುವ ₹ 150 ಕೋಟಿ ಅನುದಾನ ಸಮರ್ಪಕ ಬಳಕೆಗೆ ರೂಪುರೇಷೆ ಸಿದ್ಧಪಡಿಸುವ ಕಾರ್ಯ ಶುರುವಾಗಿದೆ’ ಎಂದು ರಾಜ್ಯೋತ್ಸವ ಭಾಷಣದಲ್ಲಿ ಹೇಳಿದರು.