ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಇದೇ 15ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.
63 ಪುರಸ್ಕೃತರ ಹೆಸರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಂತಿಮಗೊಳಿಸಲಿದ್ದು, ಇದೇ12ಕ್ಕೆ ಅವರ ಹೆಸರನ್ನು ಪ್ರಕಟಿಸಲಾಗುತ್ತದೆ.
ಸಾಮಾನ್ಯವಾಗಿ ಅಕ್ಟೋಬರ್ ಕೊನೆಯ ವಾರದಲ್ಲಿ ಪುರಸ್ಕೃತರ ಹೆಸರನ್ನು ಪ್ರಕಟಿಸಿ ನವೆಂಬರ್ 1ರಂದು ಪ್ರದಾನ ಮಾಡಲಾಗುತ್ತಿತ್ತು. ಈ ಸಲ ಉಪಚುನಾವಣೆಯ ನೀತಿಸಂಹಿತೆಯ ಕಾರಣಕ್ಕೆ ಹೆಸರನ್ನು ಪ್ರಕಟಿಸಿರಲಿಲ್ಲ. ಸರ್ಕಾರದ ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.