<p><strong>ಶ್ರೀವಿಜಯ ಪ್ರಧಾನ ವೇದಿಕೆ (ಕಲಬುರ್ಗಿ):</strong>' ಕನ್ನಡ ಭಾಷೆ ನಶಿಸುತ್ತಿದೆ ಎಂಬ ಆತಂಕ ದೂರವಾಗಲು ಕನ್ನಡ ಮತ್ತೊಮ್ಮೆ ಪುನರುತ್ಥಾನವಾಗಬೇಕಿದೆ 'ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ನಗರದ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಆರಂಭವಾದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ’ಕನ್ನಡಿಗರಿಗೇ ಮಾತೃ ಭಾಷೆಯ ಮೇಲೆ ನಿರಾಸಕ್ತಿ ಇದೆ. ಇದು ದೂರವಾಗಬೇಕಾದರೆ, ಭಾಷೆಯ ಪುನರುತ್ಥಾನ ಆಗಲೇ ಬೇಕು’ ಎಂದು ಅವರು ಪ್ರತಿಪಾದಿಸಿದರು.</p>.<p>ಇತ್ತೀಚಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಹೊಸ ರೂಪವನ್ನು ಪಡೆದುಕೊಳ್ಳುತ್ತಿದೆ. ಕನ್ನಡಕ್ಕೆ ಆತಂಕ ಬಂದಿದ್ದರೂ ಇಂತಹ ಸಾಹಿತ್ಯ ಸಮ್ಮೇಳನಗಳ ಮೂಲಕ ಅದನ್ನು ದೂರ ಮಾಡಲಾಗುತ್ತಿದೆ ಎಂದು ಹೇಳಿದರು.</p>.<p>ವಚನ ಸಾಹಿತ್ಯ ಹಾಗೂ ದಲಿತ ಸಾಹಿತ್ಯಕ್ಕೆ ಕಲ್ಯಾಣ ಕರ್ನಾಟಕ ಭಾಗದ ಕೊಡುಗೆ ಅಪಾರವಿದೆ. ವೈಚಾರಿಕ ಚಿಂತನೆಗಳ ಅನಾವರಣವು ಕೂಡ ಇಲ್ಲಿಂದಲೇ ಆಗಿದ್ದು ಎಂದರು.</p>.<p>ನಾಡು, ನುಡಿಯ ರಕ್ಷಣೆಗಾಗಿ ಎಲ್ಲರನ್ನು ಒಳಗೊಂಡು ಹೋಗುವಂತಹ ಸಂಘಟನಾತ್ಮಕ ಕೆಲಸವಾಗುತ್ತಿದೆ. ಜೊತೆಗೆ ಹೊಸತನದ ಸಾಹಿತ್ಯಗಳು ಕೂಡ ರಚನೆಯಾಗುತ್ತಿವೆ. ಇದರಿಂದಾಗಿಯೇ ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಬಂದಿವೆ ಎಂದು ಹೇಳಿದರು.</p>.<p>105 ವರ್ಷಗಳ ಇತಿಹಾಸದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಂದಿಗೂ ಕಾಣದಂತಹ ಅಭಿವೃದ್ಧಿ ಕೆಲಸಗಳು ಇತ್ತೀಚಿನ ದಿನಗಳಲ್ಲಿ ಆಗುತ್ತಿವೆ. ಈ ಭಾಗದವರಿಗೆ ಉದ್ಯೋಗವಕಾಶಗಳು ಕೂಡ ದೊರೆತಿವೆ. ಇದರ ಜೊತೆಗೆ ಕನ್ನಡಿಗರು, ಕನ್ನಡಪರ ಸಂಘಟನೆಗಳು ಹಾಗೂ ಸಂಘ–ಸಂಸ್ಥೆಗಳು ಒಗ್ಗಟ್ಟಾಗಿ ನಾಡಿನ ಪ್ರಗತಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.</p>.<p><strong>’ಲಾಂಛನ ಘೋಷಿಸಲಿ...’</strong></p>.<p>ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ತನ್ನದೇ ಆದ ಲಾಂಛನವನ್ನು ಘೋಷಿಸಬೇಕು ಎಂದು ಸಮ್ಮೇಳನದಲ್ಲಿ ಭಾಗವಹಿಸಿದ್ದ ಕನ್ನಡ ಸಾಹಿತ್ಯಾಸಕ್ತರೊಬ್ಬರು ಆಗ್ರಹಿಸಿದರು.</p>.<p>ಸಾಹಿತ್ಯ ಸಮ್ಮೇಳನಕ್ಕೆ ತನ್ನದೇ ಆದ ಲಾಂಛನ ಬೇಕಿದೆ. ಈ ಬಗ್ಗೆ ಹಿಂದಿನ ಹಲವು ಸಮ್ಮೇಳನಗಳಲ್ಲಿ ಒತ್ತಾಯಿಸುತ್ತಾ ಬಂದರೂ ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀವಿಜಯ ಪ್ರಧಾನ ವೇದಿಕೆ (ಕಲಬುರ್ಗಿ):</strong>' ಕನ್ನಡ ಭಾಷೆ ನಶಿಸುತ್ತಿದೆ ಎಂಬ ಆತಂಕ ದೂರವಾಗಲು ಕನ್ನಡ ಮತ್ತೊಮ್ಮೆ ಪುನರುತ್ಥಾನವಾಗಬೇಕಿದೆ 'ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ನಗರದ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಆರಂಭವಾದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ’ಕನ್ನಡಿಗರಿಗೇ ಮಾತೃ ಭಾಷೆಯ ಮೇಲೆ ನಿರಾಸಕ್ತಿ ಇದೆ. ಇದು ದೂರವಾಗಬೇಕಾದರೆ, ಭಾಷೆಯ ಪುನರುತ್ಥಾನ ಆಗಲೇ ಬೇಕು’ ಎಂದು ಅವರು ಪ್ರತಿಪಾದಿಸಿದರು.</p>.<p>ಇತ್ತೀಚಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಹೊಸ ರೂಪವನ್ನು ಪಡೆದುಕೊಳ್ಳುತ್ತಿದೆ. ಕನ್ನಡಕ್ಕೆ ಆತಂಕ ಬಂದಿದ್ದರೂ ಇಂತಹ ಸಾಹಿತ್ಯ ಸಮ್ಮೇಳನಗಳ ಮೂಲಕ ಅದನ್ನು ದೂರ ಮಾಡಲಾಗುತ್ತಿದೆ ಎಂದು ಹೇಳಿದರು.</p>.<p>ವಚನ ಸಾಹಿತ್ಯ ಹಾಗೂ ದಲಿತ ಸಾಹಿತ್ಯಕ್ಕೆ ಕಲ್ಯಾಣ ಕರ್ನಾಟಕ ಭಾಗದ ಕೊಡುಗೆ ಅಪಾರವಿದೆ. ವೈಚಾರಿಕ ಚಿಂತನೆಗಳ ಅನಾವರಣವು ಕೂಡ ಇಲ್ಲಿಂದಲೇ ಆಗಿದ್ದು ಎಂದರು.</p>.<p>ನಾಡು, ನುಡಿಯ ರಕ್ಷಣೆಗಾಗಿ ಎಲ್ಲರನ್ನು ಒಳಗೊಂಡು ಹೋಗುವಂತಹ ಸಂಘಟನಾತ್ಮಕ ಕೆಲಸವಾಗುತ್ತಿದೆ. ಜೊತೆಗೆ ಹೊಸತನದ ಸಾಹಿತ್ಯಗಳು ಕೂಡ ರಚನೆಯಾಗುತ್ತಿವೆ. ಇದರಿಂದಾಗಿಯೇ ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಬಂದಿವೆ ಎಂದು ಹೇಳಿದರು.</p>.<p>105 ವರ್ಷಗಳ ಇತಿಹಾಸದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಂದಿಗೂ ಕಾಣದಂತಹ ಅಭಿವೃದ್ಧಿ ಕೆಲಸಗಳು ಇತ್ತೀಚಿನ ದಿನಗಳಲ್ಲಿ ಆಗುತ್ತಿವೆ. ಈ ಭಾಗದವರಿಗೆ ಉದ್ಯೋಗವಕಾಶಗಳು ಕೂಡ ದೊರೆತಿವೆ. ಇದರ ಜೊತೆಗೆ ಕನ್ನಡಿಗರು, ಕನ್ನಡಪರ ಸಂಘಟನೆಗಳು ಹಾಗೂ ಸಂಘ–ಸಂಸ್ಥೆಗಳು ಒಗ್ಗಟ್ಟಾಗಿ ನಾಡಿನ ಪ್ರಗತಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.</p>.<p><strong>’ಲಾಂಛನ ಘೋಷಿಸಲಿ...’</strong></p>.<p>ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ತನ್ನದೇ ಆದ ಲಾಂಛನವನ್ನು ಘೋಷಿಸಬೇಕು ಎಂದು ಸಮ್ಮೇಳನದಲ್ಲಿ ಭಾಗವಹಿಸಿದ್ದ ಕನ್ನಡ ಸಾಹಿತ್ಯಾಸಕ್ತರೊಬ್ಬರು ಆಗ್ರಹಿಸಿದರು.</p>.<p>ಸಾಹಿತ್ಯ ಸಮ್ಮೇಳನಕ್ಕೆ ತನ್ನದೇ ಆದ ಲಾಂಛನ ಬೇಕಿದೆ. ಈ ಬಗ್ಗೆ ಹಿಂದಿನ ಹಲವು ಸಮ್ಮೇಳನಗಳಲ್ಲಿ ಒತ್ತಾಯಿಸುತ್ತಾ ಬಂದರೂ ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>