ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ವಿ.ವಿ.ಯಲ್ಲಿ ಅವ್ಯವಹಾರ ನಡೆದಿಲ್ಲ’

Last Updated 1 ನವೆಂಬರ್ 2018, 20:15 IST
ಅಕ್ಷರ ಗಾತ್ರ

ಹೊಸಪೇಟೆ: ‘ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನೇಮಕಾತಿ, ಕಾಮಗಾರಿಗಳಿಗೆ ಸಂಬಂಧಿಸಿದಂತೆ ಯಾವುದೇ ಅವ್ಯವಹಾರ
ನಡೆದಿಲ್ಲ’ ಎಂದು ಕುಲಪತಿ ಪ್ರೊ. ಮಲ್ಲಿಕಾ ಎಸ್‌. ಘಂಟಿ ತಿಳಿಸಿದರು.

‘ನಮ್ಮ ವಿ.ವಿ.ಯಲ್ಲಿರುವ ಒಬ್ಬ ನೌಕರ ಪ್ರಾರಂಭದಿಂದಲೂ ಲೋಕಾಯುಕ್ತಕ್ಕೆ ದೂರು ಕೊಡುವ ಹವ್ಯಾಸ ಬೆಳೆಸಿಕೊಂಡಿದ್ದಾನೆ. ಕುಲಪತಿಗಳು ತಮ್ಮ ತಾಳಕ್ಕೆ ತಕ್ಕಂತೆ ಕುಣಿಯಬೇಕು ಎನ್ನುವುದು ಆ ನೌಕರನ ಉದ್ದೇಶ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಯಾರು ಆತನ ಮಾತು ಕೇಳುವುದಿಲ್ಲವೋ ಅವರ ವಿರುದ್ಧ ಲೋಕಾಯುಕ್ತಕ್ಕೆ, ಎ.ಸಿ.ಬಿ.ಗೆ ದೂರು ಕೊಡುತ್ತಾನೆ. ಆದರೆ, ಆ ದೂರಿಗೆ ಸಂಬಂಧಿಸಿದಂತೆ ಇದುವರೆಗೆ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT