‘ನನ್ನ ಮೊಬೈಲ್ ದುರ್ಬಳಕೆ ಮಾಡಿಕೊಂಡು ಕೆಲವರು ಈ ಷಡ್ಯಂತ್ರ ಮಾಡಿದ್ದಾರೆ. ಆ ಮಹಿಳೆ ಯಾರು ಎಂಬುದೇ ಗೊತ್ತಿಲ್ಲ. ನಾಲ್ಕೂವರೆ ವರ್ಷಗಳ ಹಿಂದೆ ನನ್ನ ಪೀಠಾರೋಹಣದ ವೇಳೆ ಸಂಸಾರಿ ಸ್ವಾಮೀಜಿಯನ್ನು ಮಠಕ್ಕೆ ನೇಮಿಸಬೇಡಿ ಎಂದು ಕೆಲವರು ಆಕ್ಷೇಪಿಸಿದ್ದರು. ಇಂಥದ್ದೇ ಪತ್ರ ವ್ಯವಹಾರ ಮಾಡಿ, ನನ್ನ ಗುರುಗಳನ್ನೂ ಪೀಠದಿಂದ ಇಳಿಸಲು ಪ್ರಯತ್ನಿಸಲಾಗಿತ್ತು. ನಾನು ಪೀಠತ್ಯಾಗ ಮಾಡುತ್ತೇನೆ. ಸಮಾಜ ಗುರುತಿಸುವ ವ್ಯಕ್ತಿಯನ್ನು ಪೀಠಾಧಿಪತಿ ಮಾಡುತ್ತೇನೆ’ ಎಂದು ಸ್ವಾಮೀಜಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.