<p><strong>ಡಂಬಳ (ಗದಗ ಜಿಲ್ಲೆ):</strong>‘ಕಪ್ಪತ್ತಗುಡ್ಡಕ್ಕೆ ವನ್ಯಜೀವಿಧಾಮದ ಸ್ಥಾನಮಾನ ನೀಡಿರುವುದನ್ನು ವಿರೋಧಿಸುತ್ತೇನೆ’ ಎಂದು ಬಿಜೆಪಿ ಶಾಸಕ ಕಳಕಪ್ಪ ಬಂಡಿ ಮಂಗಳವಾರ ಹೇಳಿದರು.</p>.<p>ಇಲ್ಲಿಗೆ ಸಮೀಪದ ಶಿವಾಜಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವರು ಮಾತನಾಡಿದರು.</p>.<p>‘ಕಪ್ಪತ್ತಗುಡ್ಡದಲ್ಲಿ ಹುಲಿ, ಸಿಂಹ ವಾಸವಾಗಿಲ್ಲ. ಈ ಭಾಗದಲ್ಲಿ ಹಲವು ದಶಕಗಳಿಂದ ವಾಸಿಸುತ್ತಿರುವ ಗ್ರಾಮಸ್ಥರಿಂದಲೂ ಈ ಗುಡ್ಡಕ್ಕೆ ಯಾವುದೇ ಹಾನಿಯಾಗಿಲ್ಲ. ವನ್ಯಧಾಮ ಸ್ಥಾನಮಾನದಿಂದ ರೈತರಿಗೆ ಅನುಕೂಲವಾಗುವ ಬದಲು ತೊಂದರೆಯಾಗುವ ಸಾಧ್ಯತೆಗಳೇ ಹೆಚ್ಚು’ ಎಂದು ಅಭಿಪ್ರಾಯಪಟ್ಟರು.</p>.<p>‘ವನ್ಯಜೀವಿಧಾಮ ಸ್ಥಾನಮಾನ ಲಭಿಸಿದ ನಂತರ ಕಪ್ಪತಗುಡ್ಡದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋದವರ ವಿರುದ್ಧ ಅರಣ್ಯ ಇಲಾಖೆಯವರು ಪ್ರಕರಣ ದಾಖಲಿಸಿ, ದಂಡ ವಿಧಿಸುತ್ತಿದ್ದಾರೆ. ಇದರಿಂದ ಈ ಭಾಗದಲ್ಲಿ ವಾಸ ಮಾಡುವವರಿಗೆ ತೊಂದರೆ ಆಗುತ್ತಿದೆ. ಕೃಷಿ ಕೆಲಸ ಹಾಗೂ ಅಭಿವೃದ್ಧಿ ಕಾರ್ಯಗಳಿಗೂ ಅಡಚಣೆ ಆಗುತ್ತಿದೆ’ ಎಂದು ದೂರಿದರು.</p>.<p><strong>ಉದ್ಯೋಗ ಇಲ್ಲ:</strong>‘ಜಿಲ್ಲೆಯಲ್ಲಿ ಪೊಸ್ಕೊ ಕಂಪನಿ ಸ್ಥಾಪನೆ ಆಗಿದ್ದರೆ ಸಾವಿರಾರು ಯುವಕರಿಗೆ ಉದ್ಯೋಗ ಲಭಿಸುತ್ತಿತ್ತು. ಆದರೆ, ಕೆಲ ಬುದ್ಧಿಜೀವಿಗಳು, ಹೋರಾಟಗಾರರು ಜನರನ್ನು ದಿಕ್ಕುತಪ್ಪಿಸಿ, ಆ ಕಂಪನಿ ಇಲ್ಲಿ ಸ್ಥಾಪನೆಯಾಗದಂತೆ ಮಾಡಿದರು. ಇದರಿಂದ ಈ ಭಾಗದ ಜನರು ಉದ್ಯೋಗ ಹುಡುಕಿಕೊಂಡು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳು ಸ್ಥಾಪನೆಯಾದರೆ ಜಿಲ್ಲೆ ಅಭಿವೃದ್ಧಿ ಹೊಂದುತ್ತದೆ, ಜನರ ಆರ್ಥಿಕಮಟ್ಟ ಸುಧಾರಣೆ ಆಗುತ್ತದೆ ಎಂದು ದಿವಂಗತ ಕೆ.ಎಚ್.ಪಾಟೀಲ ಹೇಳುತ್ತಿದ್ದರು. ಆದರೆ, ಅವರ ಮಕ್ಕಳೇ ಈಗ ಕೈಗಾರಿಕೆಗಳ ಸ್ಥಾಪನೆಯನ್ನು ವಿರೋಧಿಸುತ್ತಿರುವುದು ವಿಪರ್ಯಾಸ. ಈ ಕುರಿತು ಸಾರ್ವಜನಿಕರು ಜಾಗೃತರಾಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡಂಬಳ (ಗದಗ ಜಿಲ್ಲೆ):</strong>‘ಕಪ್ಪತ್ತಗುಡ್ಡಕ್ಕೆ ವನ್ಯಜೀವಿಧಾಮದ ಸ್ಥಾನಮಾನ ನೀಡಿರುವುದನ್ನು ವಿರೋಧಿಸುತ್ತೇನೆ’ ಎಂದು ಬಿಜೆಪಿ ಶಾಸಕ ಕಳಕಪ್ಪ ಬಂಡಿ ಮಂಗಳವಾರ ಹೇಳಿದರು.</p>.<p>ಇಲ್ಲಿಗೆ ಸಮೀಪದ ಶಿವಾಜಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವರು ಮಾತನಾಡಿದರು.</p>.<p>‘ಕಪ್ಪತ್ತಗುಡ್ಡದಲ್ಲಿ ಹುಲಿ, ಸಿಂಹ ವಾಸವಾಗಿಲ್ಲ. ಈ ಭಾಗದಲ್ಲಿ ಹಲವು ದಶಕಗಳಿಂದ ವಾಸಿಸುತ್ತಿರುವ ಗ್ರಾಮಸ್ಥರಿಂದಲೂ ಈ ಗುಡ್ಡಕ್ಕೆ ಯಾವುದೇ ಹಾನಿಯಾಗಿಲ್ಲ. ವನ್ಯಧಾಮ ಸ್ಥಾನಮಾನದಿಂದ ರೈತರಿಗೆ ಅನುಕೂಲವಾಗುವ ಬದಲು ತೊಂದರೆಯಾಗುವ ಸಾಧ್ಯತೆಗಳೇ ಹೆಚ್ಚು’ ಎಂದು ಅಭಿಪ್ರಾಯಪಟ್ಟರು.</p>.<p>‘ವನ್ಯಜೀವಿಧಾಮ ಸ್ಥಾನಮಾನ ಲಭಿಸಿದ ನಂತರ ಕಪ್ಪತಗುಡ್ಡದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋದವರ ವಿರುದ್ಧ ಅರಣ್ಯ ಇಲಾಖೆಯವರು ಪ್ರಕರಣ ದಾಖಲಿಸಿ, ದಂಡ ವಿಧಿಸುತ್ತಿದ್ದಾರೆ. ಇದರಿಂದ ಈ ಭಾಗದಲ್ಲಿ ವಾಸ ಮಾಡುವವರಿಗೆ ತೊಂದರೆ ಆಗುತ್ತಿದೆ. ಕೃಷಿ ಕೆಲಸ ಹಾಗೂ ಅಭಿವೃದ್ಧಿ ಕಾರ್ಯಗಳಿಗೂ ಅಡಚಣೆ ಆಗುತ್ತಿದೆ’ ಎಂದು ದೂರಿದರು.</p>.<p><strong>ಉದ್ಯೋಗ ಇಲ್ಲ:</strong>‘ಜಿಲ್ಲೆಯಲ್ಲಿ ಪೊಸ್ಕೊ ಕಂಪನಿ ಸ್ಥಾಪನೆ ಆಗಿದ್ದರೆ ಸಾವಿರಾರು ಯುವಕರಿಗೆ ಉದ್ಯೋಗ ಲಭಿಸುತ್ತಿತ್ತು. ಆದರೆ, ಕೆಲ ಬುದ್ಧಿಜೀವಿಗಳು, ಹೋರಾಟಗಾರರು ಜನರನ್ನು ದಿಕ್ಕುತಪ್ಪಿಸಿ, ಆ ಕಂಪನಿ ಇಲ್ಲಿ ಸ್ಥಾಪನೆಯಾಗದಂತೆ ಮಾಡಿದರು. ಇದರಿಂದ ಈ ಭಾಗದ ಜನರು ಉದ್ಯೋಗ ಹುಡುಕಿಕೊಂಡು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳು ಸ್ಥಾಪನೆಯಾದರೆ ಜಿಲ್ಲೆ ಅಭಿವೃದ್ಧಿ ಹೊಂದುತ್ತದೆ, ಜನರ ಆರ್ಥಿಕಮಟ್ಟ ಸುಧಾರಣೆ ಆಗುತ್ತದೆ ಎಂದು ದಿವಂಗತ ಕೆ.ಎಚ್.ಪಾಟೀಲ ಹೇಳುತ್ತಿದ್ದರು. ಆದರೆ, ಅವರ ಮಕ್ಕಳೇ ಈಗ ಕೈಗಾರಿಕೆಗಳ ಸ್ಥಾಪನೆಯನ್ನು ವಿರೋಧಿಸುತ್ತಿರುವುದು ವಿಪರ್ಯಾಸ. ಈ ಕುರಿತು ಸಾರ್ವಜನಿಕರು ಜಾಗೃತರಾಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>