ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಈ ಮಠವು ಹಿಂದಿನಿಂದಲೂ ಅನೇಕ ಸಂಸ್ಥಾನಗಳಿಗೆ ಮಾರ್ಗದರ್ಶನ ಮಾಡಿದೆ. ಸಮಾಜದಲ್ಲಿ ಸೌಹಾರ್ದತೆಯಿಂದ ಬದುಕಲು ಕಲಿಸುತ್ತಿದೆ. ಅನ್ನ ಮತ್ತು ಅಕ್ಷರ ದಾಸೋಹ ಮಾಡುತ್ತಿದೆ. ಜನರ ಸಂಕಷ್ಟ ನಿವಾರಿಸಲು ಶ್ರಮಿಸುತ್ತಿದೆ. ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಸಾಮಾಜಿಕ ಬದಲಾವಣೆಗೆ ದುಡಿಯುತ್ತಿದೆ ಎಂದರು.