ಬಿಡದಿಯಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ನೆರೆ ಪರಿಹಾರ ಕೋರಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕಿತ್ತು. ಕೆಲವು ಜಿಲ್ಲೆಗಳ ಪ್ರಸ್ತಾವಗಳು ತಿರಸ್ಕೃತಗೊಂಡಿದ್ದವು. ಬುಧವಾರ ಪರಿಷ್ಕೃತ ಪ್ರಸ್ತಾವ ಸಲ್ಲಿಸಲಾಗಿದೆ. ವಾರದೊಳಗೆ ಅನುದಾನ ಬಿಡುಗಡೆ ಆಗುವ ನಿರೀಕ್ಷೆ ಇದೆ. ಒಬ್ಬನೇ ಒಬ್ಬ ಬಿಜೆಪಿ ಸಂಸದರನ್ನು ಆಯ್ಕೆ ಮಾಡದ ತಮಿಳುನಾಡು, ಕೇರಳಕ್ಕೂ ಮೋದಿ ಸರ್ಕಾರ ಪರಿಹಾರ ನೀಡುತ್ತಿದೆ. ಹೀಗಿರುವಾಗ ಕರ್ನಾಟಕಕ್ಕೆ ಅನ್ಯಾಯ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದರು.