<p><strong>ಬೆಂಗಳೂರು:</strong> ‘ರಾಜ್ಯದ 100 ಬರಪೀಡಿತ ತಾಲ್ಲೂಕುಗಳಲ್ಲಿ ‘ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ’ ಎಂಬ ಹೊಸ ಯೋಜನೆ ಜಾರಿಗೆ ತರಲು ಉದ್ದೇಶಿಸಲಾಗಿದೆ’ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು.</p>.<p>ಸೋಮವಾರ ನಡೆದ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಸಂಯೋಜಿಸಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ’ ಎಂದರು.</p>.<p>ಎಲ್ಲ ನ್ಯಾಯಾಲಯಗಳಲ್ಲಿ ಮಹಿಳಾ ವಕೀಲರ ಅನುಕೂಲಕ್ಕಾಗಿ ಅಗತ್ಯ ಸೌಲಭ್ಯಗಳೊಂದಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಗಳನ್ನು ಆರಂಭಿಸಲಾಗುತ್ತದೆ ಎಂದ ಅವರು, ‘ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ 25ರಷ್ಟು ಮೀಸಲಾತಿ ಕಲ್ಪಿಸಲು ಅನುಮೋದನೆ ನೀಡಿದೆ’ ಎಂದರು.</p>.<p>‘ಬೆಂಗಳೂರು ನಗರದಲ್ಲಿ ಉತ್ಪತ್ತಿಯಾಗುವ ಒಳಚರಂಡಿ ನೀರನ್ನು ಸಂಸ್ಕರಿಸಿ ಬರಪೀಡಿತ ಜಿಲ್ಲೆಗಳಾದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಕೆರೆಗಳ ತುಂಬಿಸಲಾಗುತ್ತಿದೆ. ಈ ಯೋಜನೆಯನ್ನು ಇತರ ಪ್ರಮುಖ ನಗರಗಳಿಗೂ ವಿಸ್ತರಿಸಲು ಉದ್ದೇಶಿಸಲಾಗಿದೆ’ ಎಂದು ಅವರು ಹೇಳಿದರು.</p>.<p><strong>ಭಾಷಣದ ಪ್ರಮುಖ ಸಾರ</strong><br />*ಪೋಡಿ ಅಭಿಯಾನ ಯೋಜನೆಯಡಿ 2,452 ಗ್ರಾಮಗಳಲ್ಲಿ ಪೋಡಿ ಅಭಿಯಾನ ಪೂರ್ಣಗೊಳಿಸಲಾಗಿದೆ. ಉಳಿದ ಗ್ರಾಮಗಳಲ್ಲಿ<br />ಚುರುಕುಗತಿಯಲ್ಲಿ ಇದನ್ನು ಅನುಷ್ಠಾನಗೊಳಿಸಲಾಗುವುದು.</p>.<p>*ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಹಾಸನ, ವಿಜಯಪುರ ಹಾಗೂ ಕಾರವಾರ ವಿಮಾನ ನಿಲ್ದಾಣಗಳ ಅಭಿವೃದ್ಧಿಗಾಗಿ ವಿಸ್ತೃತ ಯೋಜನಾ ವರದಿಗಳನ್ನು ಸಿದ್ಧಪಡಿಸಲಾಗುತ್ತಿದೆ.</p>.<p>*ಸ್ವತಂತ್ರವಾದ ಹಾಗೂ ಗ್ರಿಡ್–ಸಂಪರ್ಕ ಹೊಂದಿದ ಸೌರಶಕ್ತಿ ಚಾಲಿತ ಕೃಷಿ ಪಂಪ್ಸೆಟ್ಗಳನ್ನು ಉತ್ತೇಜಿ<br />ಸುವ ನೀತಿ ರೂಪಿಸಲಾಗುತ್ತದೆ.</p>.<p>*ಅಪರಾಧಿಗಳು ಹಾಗೂ ಭಯೋತ್ಪಾದಕರನ್ನು ಬಂಧಿಸಿಡಲು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಅತಿ ಭದ್ರತಾ ಕಾರಾಗ್ರಹ ನಿರ್ಮಿಸಲಾಗುತ್ತಿದೆ. ವಿಜಯಪುರ ಹಾಗೂ ಬೀದರ್ನಲ್ಲೂ ಕೇಂದ್ರ ಕಾರಾಗೃಹಗಳನ್ನು ನಿರ್ಮಾಣ ಮಾಡಲಾಗುತ್ತಿದೆ.</p>.<p><strong>ಆರ್ಥಿಕ ಸ್ಥಿತಿ ಉತ್ತಮ</strong><br />‘ದೂರದೃಷ್ಟಿಯ ಆರ್ಥಿಕ ನಿರ್ವಹಣೆಗೆ ರಾಜ್ಯ ಪ್ರಖ್ಯಾತ. ನಿಗದಿಪಡಿಸಲಾದ ಆರ್ಥಿಕ ಹಾಗೂ ಸಾಲ ಕ್ರೋಡೀಕರಣ ಗುರಿಯನ್ನು ನಿರ್ದಿಷ್ಟಪಡಿಸಿದ ಕಾಲಾವಧಿಯ ಮುನ್ನವೇ ಸಾಧಿಸಿದೆ’ ಎಂದು ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ದೇಶದ ಒಟ್ಟು ದೇಶೀಯ ಉತ್ಪನ್ನಕ್ಕೆ (ಜಿಡಿಪಿ) ರಾಜ್ಯದ ಕೊಡುಗೆ ಗಣನೀಯ. ರಾಜ್ಯದ ಎರಡನೇ ಹಂತದ ನಗರಗಳೂ ರಾಜ್ಯದ ಪ್ರಗತಿಗೆ ಕೊಡುಗೆ ನೀಡುವ ಅಪಾರ ಸಾಮರ್ಥ್ಯ ಹೊಂದಿದ್ದು, ಅವುಗಳ ಬಗ್ಗೆ ಗಮನ ಕೇಂದ್ರೀಕರಿಸಿ ಸಜ್ಜುಗೊಳಿಸಬೇಕು ಎಂದರು.</p>.<p>ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರ ನೆರವಿಗೆ ಸಮರೋಪಾದಿಯಲ್ಲಿ ರಕ್ಷಣಾ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಂಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದ 100 ಬರಪೀಡಿತ ತಾಲ್ಲೂಕುಗಳಲ್ಲಿ ‘ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ’ ಎಂಬ ಹೊಸ ಯೋಜನೆ ಜಾರಿಗೆ ತರಲು ಉದ್ದೇಶಿಸಲಾಗಿದೆ’ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು.</p>.<p>ಸೋಮವಾರ ನಡೆದ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಸಂಯೋಜಿಸಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ’ ಎಂದರು.</p>.<p>ಎಲ್ಲ ನ್ಯಾಯಾಲಯಗಳಲ್ಲಿ ಮಹಿಳಾ ವಕೀಲರ ಅನುಕೂಲಕ್ಕಾಗಿ ಅಗತ್ಯ ಸೌಲಭ್ಯಗಳೊಂದಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಗಳನ್ನು ಆರಂಭಿಸಲಾಗುತ್ತದೆ ಎಂದ ಅವರು, ‘ಪೊಲೀಸ್ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ 25ರಷ್ಟು ಮೀಸಲಾತಿ ಕಲ್ಪಿಸಲು ಅನುಮೋದನೆ ನೀಡಿದೆ’ ಎಂದರು.</p>.<p>‘ಬೆಂಗಳೂರು ನಗರದಲ್ಲಿ ಉತ್ಪತ್ತಿಯಾಗುವ ಒಳಚರಂಡಿ ನೀರನ್ನು ಸಂಸ್ಕರಿಸಿ ಬರಪೀಡಿತ ಜಿಲ್ಲೆಗಳಾದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಕೆರೆಗಳ ತುಂಬಿಸಲಾಗುತ್ತಿದೆ. ಈ ಯೋಜನೆಯನ್ನು ಇತರ ಪ್ರಮುಖ ನಗರಗಳಿಗೂ ವಿಸ್ತರಿಸಲು ಉದ್ದೇಶಿಸಲಾಗಿದೆ’ ಎಂದು ಅವರು ಹೇಳಿದರು.</p>.<p><strong>ಭಾಷಣದ ಪ್ರಮುಖ ಸಾರ</strong><br />*ಪೋಡಿ ಅಭಿಯಾನ ಯೋಜನೆಯಡಿ 2,452 ಗ್ರಾಮಗಳಲ್ಲಿ ಪೋಡಿ ಅಭಿಯಾನ ಪೂರ್ಣಗೊಳಿಸಲಾಗಿದೆ. ಉಳಿದ ಗ್ರಾಮಗಳಲ್ಲಿ<br />ಚುರುಕುಗತಿಯಲ್ಲಿ ಇದನ್ನು ಅನುಷ್ಠಾನಗೊಳಿಸಲಾಗುವುದು.</p>.<p>*ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಹಾಸನ, ವಿಜಯಪುರ ಹಾಗೂ ಕಾರವಾರ ವಿಮಾನ ನಿಲ್ದಾಣಗಳ ಅಭಿವೃದ್ಧಿಗಾಗಿ ವಿಸ್ತೃತ ಯೋಜನಾ ವರದಿಗಳನ್ನು ಸಿದ್ಧಪಡಿಸಲಾಗುತ್ತಿದೆ.</p>.<p>*ಸ್ವತಂತ್ರವಾದ ಹಾಗೂ ಗ್ರಿಡ್–ಸಂಪರ್ಕ ಹೊಂದಿದ ಸೌರಶಕ್ತಿ ಚಾಲಿತ ಕೃಷಿ ಪಂಪ್ಸೆಟ್ಗಳನ್ನು ಉತ್ತೇಜಿ<br />ಸುವ ನೀತಿ ರೂಪಿಸಲಾಗುತ್ತದೆ.</p>.<p>*ಅಪರಾಧಿಗಳು ಹಾಗೂ ಭಯೋತ್ಪಾದಕರನ್ನು ಬಂಧಿಸಿಡಲು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಅತಿ ಭದ್ರತಾ ಕಾರಾಗ್ರಹ ನಿರ್ಮಿಸಲಾಗುತ್ತಿದೆ. ವಿಜಯಪುರ ಹಾಗೂ ಬೀದರ್ನಲ್ಲೂ ಕೇಂದ್ರ ಕಾರಾಗೃಹಗಳನ್ನು ನಿರ್ಮಾಣ ಮಾಡಲಾಗುತ್ತಿದೆ.</p>.<p><strong>ಆರ್ಥಿಕ ಸ್ಥಿತಿ ಉತ್ತಮ</strong><br />‘ದೂರದೃಷ್ಟಿಯ ಆರ್ಥಿಕ ನಿರ್ವಹಣೆಗೆ ರಾಜ್ಯ ಪ್ರಖ್ಯಾತ. ನಿಗದಿಪಡಿಸಲಾದ ಆರ್ಥಿಕ ಹಾಗೂ ಸಾಲ ಕ್ರೋಡೀಕರಣ ಗುರಿಯನ್ನು ನಿರ್ದಿಷ್ಟಪಡಿಸಿದ ಕಾಲಾವಧಿಯ ಮುನ್ನವೇ ಸಾಧಿಸಿದೆ’ ಎಂದು ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ದೇಶದ ಒಟ್ಟು ದೇಶೀಯ ಉತ್ಪನ್ನಕ್ಕೆ (ಜಿಡಿಪಿ) ರಾಜ್ಯದ ಕೊಡುಗೆ ಗಣನೀಯ. ರಾಜ್ಯದ ಎರಡನೇ ಹಂತದ ನಗರಗಳೂ ರಾಜ್ಯದ ಪ್ರಗತಿಗೆ ಕೊಡುಗೆ ನೀಡುವ ಅಪಾರ ಸಾಮರ್ಥ್ಯ ಹೊಂದಿದ್ದು, ಅವುಗಳ ಬಗ್ಗೆ ಗಮನ ಕೇಂದ್ರೀಕರಿಸಿ ಸಜ್ಜುಗೊಳಿಸಬೇಕು ಎಂದರು.</p>.<p>ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರ ನೆರವಿಗೆ ಸಮರೋಪಾದಿಯಲ್ಲಿ ರಕ್ಷಣಾ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಂಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>