ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಆನೆ ಕಾರಿಡಾರ್ ಕಿರಿದಾಗುತ್ತಿರುವುದರಿಂದ ಆನೆಗಳು ನಾಡಿಗೆ ನುಗ್ಗುತ್ತಿವೆ. ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಯೋಜನೆಯ ಹಣ ಬಳಸಿ ಜಾಗ ಖರೀದಿ ಮಾಡಿ ಕಾರಿಡಾರ್ ವ್ಯಾಪ್ತಿಯನ್ನು ಹಿಗ್ಗಿಸಲಾಗುವುದು’ ಎಂದರು.