ಶೂನ್ಯವೇಳೆಯಲ್ಲಿ ಬಿಜೆಪಿಯ ದತ್ತಾತ್ರೇಯ ಸಿ.ಪಾಟೀಲ ರೇವೂರ ಪ್ರಶ್ನೆ ಕೇಳಿದರು. ಕಲಬುರ್ಗಿ ಜಿಲ್ಲೆಯಲ್ಲಿ ಅಕ್ರಮ ಮದ್ಯದಂಗಡಿಗಳು ಇಲ್ಲ ಎಂದು ಸಚಿವರು ಉತ್ತರಿಸಿದರು. ‘ಶಾಲಾ ಕಾಲೇಜುಗಳ ಪಕ್ಕದಲ್ಲೇ ಮದ್ಯದಂಗಡಿಗಳು ಇವೆ. ಬೆಳಿಗ್ಗೆ 8ರಿಂದ ರಾತ್ರಿ 12ರ ವರೆಗೆ ಕಾರ್ಯನಿರ್ವಹಿಸುತ್ತಿವೆ’ ಎಂದು ರೇವೂರ ಗಮನ ಸೆಳೆದರು. ಅದಕ್ಕೆ ಕಾಂಗ್ರೆಸ್ನ ಪ್ರಿಯಾಂಕ್ ಖರ್ಗೆ, ತುಕಾರಾಮ್, ಭೀಮಾ ನಾಯ್ಕ್ ಮತ್ತಿತರರು ಧ್ವನಿಗೂಡಿಸಿ, ‘ಸಚಿವರು ತಪ್ಪು ಉತ್ತರ ನೀಡಿದ್ದಾರೆ. ಉತ್ತರ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು. ‘ಅನಧಿಕೃತ ಅಂಗಡಿಗಳು ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ನಾಗೇಶ್ ಪ್ರತಿಕ್ರಿಯಿಸಿದರು.