ಗಡಿ ವಿಚಾರದಲ್ಲಿ ಕಠಿಣ ನಿರ್ಧಾರ ಬೇಕು: ‘ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಪದೇ ಪದೇ ರಾಜ್ಯವನ್ನು ಕೆಣಕುತ್ತಿದೆ. ಗ್ರಾಮವೊಂದರಲ್ಲಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಸರ್ಕಾರ ಹಣ ನೀಡಿದೆ. ಆದರೆ, ಗ್ರಾಮ ಪಂಚಾಯಿತಿ ಸಮಾರಂಭದಲ್ಲಿ ಕನ್ನಡ ಬಾವುಟ ಹಾಕಿಲ್ಲ, ಕನ್ನಡ ಭಾಷೆಯಲ್ಲಿ ಮಾತನಾಡಿಲ್ಲ’ ಎಂದು ಎಚ್.ಕೆ. ಪಾಟೀಲ ಹೇಳಿದರು.