<p><strong>ಬೆಂಗಳೂರು:</strong> ಈ ಬಾರಿಯ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಅಸಂಖ್ಯ ಪ್ರಮಥರ ಗಣಮೇಳದಲ್ಲಿ ಮಾತನಾಡಿದ ಅವರು, ‘ರೈತರು ಸ್ವಾಭಿಮಾನ ಮತ್ತು ನೆಮ್ಮದಿಯಿಂದ ಬದುಕು ನಡೆಸಬೇಕಾಗಿದೆ. ಇದಕ್ಕಾಗಿ ಬಜೆಟ್ನಲ್ಲಿ ಸಾಕಷ್ಟು ಹಣ ಮೀಸಲಿಡುವ ಮೂಲಕ ನೀರಾವರಿಗೆ ಆದ್ಯತೆ ನೀಡಲಾಗುವುದು. ಬೆಳೆಗಳಿಗೆ ಹೆಚ್ಚು ಬೆಂಬಲ ಬೆಲೆ ಘೋಷಿಸಲಾಗುವುದು’ ಎಂದರು.</p>.<p>'ಮಠ-ಮಾನ್ಯಗಳಿಗೂ ಬಜೆಟ್ ನಲ್ಲಿ ಆದ್ಯತೆ ನೀಡಲಾಗುವುದು' ಎಂದು ಅವರು ಹೇಳಿದರು.</p>.<p>ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗುವುದು. ಈ ಪೈಕಿ ₹ 100 ಕೋಟಿಯನ್ನು ಇದೇ ವರ್ಷದಲ್ಲಿ ವಿನಿಯೋಗಿಸಲಾಗುವುದು. ನಾಡಿನ ಎಲ್ಲರೂ ಕಲ್ಯಾಣ ಕರ್ನಾಟಕಕ್ಕೆ ಭೇಟಿ ಮಾಡುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯ ನಡೆಯಲಿದೆ ಎಂದು ಮುಖ್ಯಮಂತ್ರಿ ಹೇಳಿದರು.</p>.<p>‘ಚಿತ್ರದುರ್ಗದಲ್ಲಿ ನಿರ್ಮಾಣವಾಗುತ್ತಿರುವ ಬಸವ ಪುತ್ಥಳಿಗೆ ಈಗಾಗಲೇ ಸಾಕಷ್ಟು ಹಣ ನೀಡಲಾಗಿದ್ದು, ಇನ್ನಷ್ಟು ಅನುದಾನ ನೀಡಲಾಗುವುದು’ ಎಂದರು.</p>.<p>‘12 ಶತಮಾನದಲ್ಲಿ ಶರಣರು ಜಾತಿ, ಮತ, ಧರ್ಮದ ಚೌಕಟ್ಟಿಲ್ಲದೆ ನಡೆದುಕೊಂಡು ಬಂದಿದ್ದರು. ಅದೇ ಮಾದರಿಗೆ ಈ ಗಣಮೇಳ ಸಾಕ್ಷಿಯಾಗಿದೆ. ಬಸವಣ್ಣನವರು ನಡೆಸಿದ್ದ ಗಣಮೇಳದಲ್ಲಿ 1.96 ಲಕ್ಷ ಜನ ಸೇರಿದ್ದು ದಾಖಲೆಯಾಗಿತ್ತು’ ಎಂದು ಯಡಿಯೂರಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಈ ಬಾರಿಯ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಅಸಂಖ್ಯ ಪ್ರಮಥರ ಗಣಮೇಳದಲ್ಲಿ ಮಾತನಾಡಿದ ಅವರು, ‘ರೈತರು ಸ್ವಾಭಿಮಾನ ಮತ್ತು ನೆಮ್ಮದಿಯಿಂದ ಬದುಕು ನಡೆಸಬೇಕಾಗಿದೆ. ಇದಕ್ಕಾಗಿ ಬಜೆಟ್ನಲ್ಲಿ ಸಾಕಷ್ಟು ಹಣ ಮೀಸಲಿಡುವ ಮೂಲಕ ನೀರಾವರಿಗೆ ಆದ್ಯತೆ ನೀಡಲಾಗುವುದು. ಬೆಳೆಗಳಿಗೆ ಹೆಚ್ಚು ಬೆಂಬಲ ಬೆಲೆ ಘೋಷಿಸಲಾಗುವುದು’ ಎಂದರು.</p>.<p>'ಮಠ-ಮಾನ್ಯಗಳಿಗೂ ಬಜೆಟ್ ನಲ್ಲಿ ಆದ್ಯತೆ ನೀಡಲಾಗುವುದು' ಎಂದು ಅವರು ಹೇಳಿದರು.</p>.<p>ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗುವುದು. ಈ ಪೈಕಿ ₹ 100 ಕೋಟಿಯನ್ನು ಇದೇ ವರ್ಷದಲ್ಲಿ ವಿನಿಯೋಗಿಸಲಾಗುವುದು. ನಾಡಿನ ಎಲ್ಲರೂ ಕಲ್ಯಾಣ ಕರ್ನಾಟಕಕ್ಕೆ ಭೇಟಿ ಮಾಡುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯ ನಡೆಯಲಿದೆ ಎಂದು ಮುಖ್ಯಮಂತ್ರಿ ಹೇಳಿದರು.</p>.<p>‘ಚಿತ್ರದುರ್ಗದಲ್ಲಿ ನಿರ್ಮಾಣವಾಗುತ್ತಿರುವ ಬಸವ ಪುತ್ಥಳಿಗೆ ಈಗಾಗಲೇ ಸಾಕಷ್ಟು ಹಣ ನೀಡಲಾಗಿದ್ದು, ಇನ್ನಷ್ಟು ಅನುದಾನ ನೀಡಲಾಗುವುದು’ ಎಂದರು.</p>.<p>‘12 ಶತಮಾನದಲ್ಲಿ ಶರಣರು ಜಾತಿ, ಮತ, ಧರ್ಮದ ಚೌಕಟ್ಟಿಲ್ಲದೆ ನಡೆದುಕೊಂಡು ಬಂದಿದ್ದರು. ಅದೇ ಮಾದರಿಗೆ ಈ ಗಣಮೇಳ ಸಾಕ್ಷಿಯಾಗಿದೆ. ಬಸವಣ್ಣನವರು ನಡೆಸಿದ್ದ ಗಣಮೇಳದಲ್ಲಿ 1.96 ಲಕ್ಷ ಜನ ಸೇರಿದ್ದು ದಾಖಲೆಯಾಗಿತ್ತು’ ಎಂದು ಯಡಿಯೂರಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>