ಬೆಂಗಳೂರು: ಸದನದಲ್ಲಿ ಬಿಜೆಪಿ ಸದಸ್ಯಗಲಾಟೆ, ಗದ್ದಲದ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿ ಧನವಿನಿಯೋಗ ವಿಧೇಯಕವನ್ನು ಮಂಡಿಸಿದರು. ಕೆಎಸ್ಒಯುಗೆ ಇಬ್ಬರು ಸದಸ್ಯರ ನಾಮ ನಿರ್ದೇಶನದ ಅನ್ವಯ ಧನವಿನಿಯೋಗ ವಿಧೇಯಕ ಅಂಗೀಕಾರವಾಗಿದೆ.
ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣ ಪ್ರಸ್ತಾಪಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ರಾಹುಲ್ ಕಿಣಿ ಅವರ ಜೀವಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಭಾಧ್ಯಕ್ಷ ರಮೇಶ್ಕುಮಾರ್ ತಿಳಿಸಿದರು.