ಶುಕ್ರವಾರ ನಡೆದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಗದ್ದಲ ಸೃಷ್ಟಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ರವಿಕುಮಾರ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದಾಗಿ ಸಭೆ ರದ್ದುಗೊಂಡಿತ್ತು. ಮುನಿಸಿಕೊಂಡಿರುವ ಪಕ್ಷದ ಮುಖಂಡರನ್ನು ಸಮಾಧಾನಗೊಳಿಸಿ, ವಿಶ್ವಾಸಕ್ಕೆ ತೆಗೆದುಕೊಳ್ಳಲು ರವಿಕುಮಾರ ಅವರು ಒಬ್ಬೊಬ್ಬರೇ ಮುಖಂಡರ ಮನೆಗೆ ಹೋಗಿ ಪ್ರತ್ಯೇಕವಾಗಿ ಭೇಟಿ ಮಾಡುತ್ತಿದ್ದಾರೆ. ಆದರೆ, ಅವರು ಅದರಲ್ಲಿ ಯಶಸ್ವಿಯಾಗಿಲ್ಲ. ಎಲ್ಲಾ ಮುಖಂಡರು ಅವರ ನಿಲುವಿಗೆ ಅಂಟಿಕೊಂಡಿದ್ದಾರೆ.