ಖರ್ಗೆ ಹೇಳಿಕೆ ಬೆನ್ನಲ್ಲೇ, ಸ್ಪಷ್ಟನೆ ನೀಡಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ‘ಯಡಿಯೂರಪ್ಪ ನೇತೃತ್ವದ ಸರ್ಕಾರವನ್ನು ಬೀಳಿಸುವುದಿಲ್ಲ. ಕುಮಾರಸ್ವಾಮಿ ಅವರಿಗೆ ಅಧಿಕಾರ ನಡೆಸಲು ಬಿಡದೆ ಯಾವ ರೀತಿಯಲ್ಲಿ ಹಿಂಸೆ ಕೊಟ್ಟರು ಎಂಬುದು ಗೊತ್ತಿದೆ. ಮತ್ತೆ ಮೈತ್ರಿ ಮಾಡಿಕೊಂಡು, ಮತ್ತೊಂದು ತಪ್ಪು ಮಾಡಲಾರೆ’ ಎಂದಿದ್ದಾರೆ.