<p><strong>ಬೆಂಗಳೂರು:</strong> ನಗರ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಚುನಾವಣಾಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.</p>.<p>ಸೋಮವಾರ (ಡಿ.9) ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಎಣಿಕೆ ಕೇಂದ್ರಗಳ ಉಸ್ತುವಾರಿಗಾಗಿ 108 ಮೇಲ್ವಿಚಾರಕರನ್ನು ನಿಯೋಜನೆ ಮಾಡಲಾಗಿದೆ. 128 ಎಣಿಕೆ ಸಹಾಯಕರು, 107 ಸೂಕ್ಷ್ಮ ವೀಕ್ಷಕರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಎಚ್.ಅನಿಲ್ ಕುಮಾರ್ ತಿಳಿಸಿದರು.</p>.<p class="Subhead"><strong>ಮೊಬೈಲ್ ನಿಷೇಧ:</strong> ‘ಅಭ್ಯರ್ಥಿಗಳ ಏಜೆಂಟರು, ಕೌಂಟಿಂಗ್ ಏಜೆಂಟರು ಮೊಬೈಲ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಕೈ ಚೀಲಗಳೊಂದಿಗೆ ಎಣಿಕೆ ಕೇಂದ್ರಕ್ಕೆ ಪ್ರವೇಶ ಮಾಡುವಂತಿಲ್ಲ. ಮಾಧ್ಯಮ ಪ್ರತಿನಿಧಿಗಳು ಹೊರತುಪಡಿಸಿ ಬೇರೆ<br />ಯವರು ಮೊಬೈಲ್ ತರುವಂತಿಲ್ಲ’ ಎಂದರು.</p>.<p>‘ಅಭ್ಯರ್ಥಿ ಅಥವಾ ಏಜೆಂಟರಿಗೆ ಎಲ್ಲಾ ಮತ ಎಣಿಕೆ ಕೇಂದ್ರಗಳಿಗೆ ಪ್ರವೇಶಿಸಲು ಅವಕಾಶ ಇಲ್ಲ. ಅವರಿಗೆ ಪ್ರತ್ಯೇಕ ಸ್ಥಳ ನಿಗದಿಪಡಿಸಲಾಗಿದೆ. ಎಲ್ಲಾ ಎಣಿಕಾ ಏಜೆಂಟರಿಗೆ ಕುಳಿತು ಕೊಳ್ಳಲು ಕುರ್ಚಿ ವ್ಯವಸ್ಥೆ ಇರುವುದಿಲ್ಲ’ ಎಂದರು.</p>.<p class="Subhead">1,300 ಭದ್ರತಾ ಸಿಬ್ಬಂದಿ ನಿಯೋಜನೆ: ಮತ ಎಣಿಕೆ ಭದ್ರತೆಗಾಗಿ 1,300 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ಪ್ರತಿಯೊಂದು ಎಣಿಕೆ ಕೇಂದ್ರದ ಭದ್ರತೆಯ ಉಸ್ತುವಾರಿಯನ್ನು ಇಬ್ಬರು ಡಿಸಿಪಿಗಳು ನೋಡಿಕೊಳ್ಳಲಿದ್ದಾರೆ’ ಎಂದರು.</p>.<p>‘ಪೊಲೀಸರ ಜೊತೆಗೆ ಕೆಎಸ್ಆರ್ಪಿ ತುಕಡಿ ಹಾಗೂ ಅರೆ ಸೇನಾ ಪಡೆಗಳನ್ನೂ ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ. ಎಣಿಕೆ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಡಿ.8ರ ಮಧ್ಯರಾತ್ರಿಯಿಂದ ಡಿ.9ರ ಮಧ್ಯರಾತ್ರಿಯವರೆಗೆ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಚುನಾವಣಾಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.</p>.<p>ಸೋಮವಾರ (ಡಿ.9) ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಎಣಿಕೆ ಕೇಂದ್ರಗಳ ಉಸ್ತುವಾರಿಗಾಗಿ 108 ಮೇಲ್ವಿಚಾರಕರನ್ನು ನಿಯೋಜನೆ ಮಾಡಲಾಗಿದೆ. 128 ಎಣಿಕೆ ಸಹಾಯಕರು, 107 ಸೂಕ್ಷ್ಮ ವೀಕ್ಷಕರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಎಚ್.ಅನಿಲ್ ಕುಮಾರ್ ತಿಳಿಸಿದರು.</p>.<p class="Subhead"><strong>ಮೊಬೈಲ್ ನಿಷೇಧ:</strong> ‘ಅಭ್ಯರ್ಥಿಗಳ ಏಜೆಂಟರು, ಕೌಂಟಿಂಗ್ ಏಜೆಂಟರು ಮೊಬೈಲ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಕೈ ಚೀಲಗಳೊಂದಿಗೆ ಎಣಿಕೆ ಕೇಂದ್ರಕ್ಕೆ ಪ್ರವೇಶ ಮಾಡುವಂತಿಲ್ಲ. ಮಾಧ್ಯಮ ಪ್ರತಿನಿಧಿಗಳು ಹೊರತುಪಡಿಸಿ ಬೇರೆ<br />ಯವರು ಮೊಬೈಲ್ ತರುವಂತಿಲ್ಲ’ ಎಂದರು.</p>.<p>‘ಅಭ್ಯರ್ಥಿ ಅಥವಾ ಏಜೆಂಟರಿಗೆ ಎಲ್ಲಾ ಮತ ಎಣಿಕೆ ಕೇಂದ್ರಗಳಿಗೆ ಪ್ರವೇಶಿಸಲು ಅವಕಾಶ ಇಲ್ಲ. ಅವರಿಗೆ ಪ್ರತ್ಯೇಕ ಸ್ಥಳ ನಿಗದಿಪಡಿಸಲಾಗಿದೆ. ಎಲ್ಲಾ ಎಣಿಕಾ ಏಜೆಂಟರಿಗೆ ಕುಳಿತು ಕೊಳ್ಳಲು ಕುರ್ಚಿ ವ್ಯವಸ್ಥೆ ಇರುವುದಿಲ್ಲ’ ಎಂದರು.</p>.<p class="Subhead">1,300 ಭದ್ರತಾ ಸಿಬ್ಬಂದಿ ನಿಯೋಜನೆ: ಮತ ಎಣಿಕೆ ಭದ್ರತೆಗಾಗಿ 1,300 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ಪ್ರತಿಯೊಂದು ಎಣಿಕೆ ಕೇಂದ್ರದ ಭದ್ರತೆಯ ಉಸ್ತುವಾರಿಯನ್ನು ಇಬ್ಬರು ಡಿಸಿಪಿಗಳು ನೋಡಿಕೊಳ್ಳಲಿದ್ದಾರೆ’ ಎಂದರು.</p>.<p>‘ಪೊಲೀಸರ ಜೊತೆಗೆ ಕೆಎಸ್ಆರ್ಪಿ ತುಕಡಿ ಹಾಗೂ ಅರೆ ಸೇನಾ ಪಡೆಗಳನ್ನೂ ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ. ಎಣಿಕೆ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಡಿ.8ರ ಮಧ್ಯರಾತ್ರಿಯಿಂದ ಡಿ.9ರ ಮಧ್ಯರಾತ್ರಿಯವರೆಗೆ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>