<p><strong>ಬೆಂಗಳೂರು</strong>: ಯಾರಿಗೆ ಮತಹಾಕಿದ್ದೇವೆ ಎನ್ನುವ ಸಾಕ್ಷಿಯನ್ನು ತೋರಿಸುವುದಕ್ಕಾಗಿ ಮತದಾನ ಮಾಡುವಾಗ ಫೋಟೊ ಕ್ಲಿಕ್ಕಿಸಿಕೊಳ್ಳುವ ಪ್ರವೃತ್ತಿ ಈ ಚುನಾವಣೆಯಲ್ಲೂ ಕಂಡುಬಂದಿದೆ.</p>.<p>ಬೆಂಗಳೂರು, ರಾಣೆಬೆನ್ನೂರು, ಶಿರಸಿ, ಮಂಡ್ಯ ಹಾಗೂ ವಿಜಯನಗರದಲ್ಲಿ ಈ ರೀತಿಯ ಘಟನೆಗಳು ನಡೆದಿದ್ದು, ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ.</p>.<p>ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲಸೂರಿನ ಮತಗಟ್ಟೆಯೊಂದರಲ್ಲಿ ಮೊಬೈಲ್ನಲ್ಲಿ ಮತದಾನದ ಫೋಟೊ ತೆಗೆದ ಆರೋಪದ ಮೇಲೆ ಚಂದ್ರಶೇಖರ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>‘ಆರೋಪಿ ಮತಗಟ್ಟೆ ಪ್ರವೇಶಿಸುವ ಮುನ್ನ ಮೊಬೈಲ್ ತೆಗೆದುಕೊಂಡು ಹೋಗದಂತೆ ಚುನಾವಣೆ ಕರ್ತವ್ಯ ನಿರತ ಸಿಬ್ಬಂದಿ ತಿಳಿಸಿದ್ದಾರೆ. ಮೊಬೈಲ್ ಇಲ್ಲವೆಂದು ಒಳಗೆ ಹೋಗಿದ್ದು, ಮತದಾನದ ಸಮಯದಲ್ಲಿ ಫೋಟೊ ತೆಗೆದಿದ್ದಾರೆ. ಇದನ್ನು ಗಮನಿಸಿದ ಸಿಬ್ಬಂದಿ ಪ್ರಶ್ನಿಸಿದ್ದಾರೆ.</p>.<p>‘ಯಾವ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂಬುದನ್ನು ತೋರಿಸುವ ಸಲುವಾಗಿ ಫೋಟೊ ತೆಗೆದಿದ್ದೇನೆ’ ಎಂದು ವಿವರಣೆ ನೀಡಿದ್ದಾರೆ. ಈ ವಿಚಾರವಾಗಿ ಆರೋಪಿ ಹಾಗೂ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ನಂತರ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿ ಚಲಾಯಿಸಿರುವ ಮತವನ್ನು ಅಸಿಂಧುಗೊಳಿಸಲು ಚುನಾವಣಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<p>ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತ ಮಂಜಯ್ಯ ಚಾವಡಿ ಎಂಬುವವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿರುವುದನ್ನು ಖಾತ್ರಿ ಪಡಿಸಲು ಮತದಾನ ಮಾಡುವ ವೇಳೆ ಫೋಟೊ ಕ್ಲಿಕ್ಕಿಸಿಕೊಂಡು ನೀತಿಸಂಹಿತೆ ಉಲ್ಲಂಘಿಸಿದ್ದಾನೆ. ಜೊತೆಗೆ ಆ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ‘ರಾವಣ ರಾಜ್ಯದಿಂದ ರಾಮ ರಾಜ್ಯದೆಡೆಗೆ ಬದಲಾವಣೆ’ ಎಂಬ ಶೀರ್ಷಿಕೆ ಅಡಿ ಪ್ರಕಟಿಸಿಕೊಂಡಿದ್ದಾರೆ.</p>.<p>ಯಲ್ಲಾಪುರದ ವ್ಯಕ್ತಿಯೊಬ್ಬರು ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಅವರಿಗೆ ಮತ ಹಾಕಿರುವ ಚಿತ್ರವೂ ಸಾಮಾಜಿಕ ಮಾಧ್ಯಮದಿಂದ ಬೆಳಕಿಗೆ ಬಂದಿದೆ. ಫೋಟೊ ತೆಗೆದುಕೊಂಡಿರುವ ಮತದಾರನ ಗುರುತು ಪತ್ತೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಸಿಇಒ ಎಂ. ರೋಷನ್ ತಿಳಿಸಿದ್ದಾರೆ.</p>.<p>ವಿಜಯನಗರ ಕ್ಷೇತ್ರದಲ್ಲೂ ಮತದಾರರೊಬ್ಬರು ಮತ ಹಾಕಿದ ನಂತರ ಅದರ ಛಾಯಾಚಿತ್ರ ತೆಗೆದುಕೊಂಡಿದ್ದಾರೆ. ಮಂಡ್ಯದಲ್ಲಿಬಿಜೆಪಿ ಅಭ್ಯರ್ಥಿ ನಾರಾಯಣಗೌಡರಿಗೆ ಮತ ಹಾಕಿದ ವಿವಿ ಪ್ಯಾಟ್ ಮತ ಖಾತ್ರಿ ಮಾಹಿತಿಯನ್ನು ಮತದಾರರೊಬ್ಬರು ಫೋಟೊ ತೆಗೆದುಕೊಂಡುಬಹಿರಂಗಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯಾರಿಗೆ ಮತಹಾಕಿದ್ದೇವೆ ಎನ್ನುವ ಸಾಕ್ಷಿಯನ್ನು ತೋರಿಸುವುದಕ್ಕಾಗಿ ಮತದಾನ ಮಾಡುವಾಗ ಫೋಟೊ ಕ್ಲಿಕ್ಕಿಸಿಕೊಳ್ಳುವ ಪ್ರವೃತ್ತಿ ಈ ಚುನಾವಣೆಯಲ್ಲೂ ಕಂಡುಬಂದಿದೆ.</p>.<p>ಬೆಂಗಳೂರು, ರಾಣೆಬೆನ್ನೂರು, ಶಿರಸಿ, ಮಂಡ್ಯ ಹಾಗೂ ವಿಜಯನಗರದಲ್ಲಿ ಈ ರೀತಿಯ ಘಟನೆಗಳು ನಡೆದಿದ್ದು, ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ.</p>.<p>ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲಸೂರಿನ ಮತಗಟ್ಟೆಯೊಂದರಲ್ಲಿ ಮೊಬೈಲ್ನಲ್ಲಿ ಮತದಾನದ ಫೋಟೊ ತೆಗೆದ ಆರೋಪದ ಮೇಲೆ ಚಂದ್ರಶೇಖರ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>‘ಆರೋಪಿ ಮತಗಟ್ಟೆ ಪ್ರವೇಶಿಸುವ ಮುನ್ನ ಮೊಬೈಲ್ ತೆಗೆದುಕೊಂಡು ಹೋಗದಂತೆ ಚುನಾವಣೆ ಕರ್ತವ್ಯ ನಿರತ ಸಿಬ್ಬಂದಿ ತಿಳಿಸಿದ್ದಾರೆ. ಮೊಬೈಲ್ ಇಲ್ಲವೆಂದು ಒಳಗೆ ಹೋಗಿದ್ದು, ಮತದಾನದ ಸಮಯದಲ್ಲಿ ಫೋಟೊ ತೆಗೆದಿದ್ದಾರೆ. ಇದನ್ನು ಗಮನಿಸಿದ ಸಿಬ್ಬಂದಿ ಪ್ರಶ್ನಿಸಿದ್ದಾರೆ.</p>.<p>‘ಯಾವ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂಬುದನ್ನು ತೋರಿಸುವ ಸಲುವಾಗಿ ಫೋಟೊ ತೆಗೆದಿದ್ದೇನೆ’ ಎಂದು ವಿವರಣೆ ನೀಡಿದ್ದಾರೆ. ಈ ವಿಚಾರವಾಗಿ ಆರೋಪಿ ಹಾಗೂ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ನಂತರ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿ ಚಲಾಯಿಸಿರುವ ಮತವನ್ನು ಅಸಿಂಧುಗೊಳಿಸಲು ಚುನಾವಣಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<p>ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತ ಮಂಜಯ್ಯ ಚಾವಡಿ ಎಂಬುವವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿರುವುದನ್ನು ಖಾತ್ರಿ ಪಡಿಸಲು ಮತದಾನ ಮಾಡುವ ವೇಳೆ ಫೋಟೊ ಕ್ಲಿಕ್ಕಿಸಿಕೊಂಡು ನೀತಿಸಂಹಿತೆ ಉಲ್ಲಂಘಿಸಿದ್ದಾನೆ. ಜೊತೆಗೆ ಆ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ‘ರಾವಣ ರಾಜ್ಯದಿಂದ ರಾಮ ರಾಜ್ಯದೆಡೆಗೆ ಬದಲಾವಣೆ’ ಎಂಬ ಶೀರ್ಷಿಕೆ ಅಡಿ ಪ್ರಕಟಿಸಿಕೊಂಡಿದ್ದಾರೆ.</p>.<p>ಯಲ್ಲಾಪುರದ ವ್ಯಕ್ತಿಯೊಬ್ಬರು ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಅವರಿಗೆ ಮತ ಹಾಕಿರುವ ಚಿತ್ರವೂ ಸಾಮಾಜಿಕ ಮಾಧ್ಯಮದಿಂದ ಬೆಳಕಿಗೆ ಬಂದಿದೆ. ಫೋಟೊ ತೆಗೆದುಕೊಂಡಿರುವ ಮತದಾರನ ಗುರುತು ಪತ್ತೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಸಿಇಒ ಎಂ. ರೋಷನ್ ತಿಳಿಸಿದ್ದಾರೆ.</p>.<p>ವಿಜಯನಗರ ಕ್ಷೇತ್ರದಲ್ಲೂ ಮತದಾರರೊಬ್ಬರು ಮತ ಹಾಕಿದ ನಂತರ ಅದರ ಛಾಯಾಚಿತ್ರ ತೆಗೆದುಕೊಂಡಿದ್ದಾರೆ. ಮಂಡ್ಯದಲ್ಲಿಬಿಜೆಪಿ ಅಭ್ಯರ್ಥಿ ನಾರಾಯಣಗೌಡರಿಗೆ ಮತ ಹಾಕಿದ ವಿವಿ ಪ್ಯಾಟ್ ಮತ ಖಾತ್ರಿ ಮಾಹಿತಿಯನ್ನು ಮತದಾರರೊಬ್ಬರು ಫೋಟೊ ತೆಗೆದುಕೊಂಡುಬಹಿರಂಗಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>