ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಣಸೂರು ಜಿಲ್ಲೆ ಖಚಿತ: ವಿಶ್ವನಾಥ್‌ ಭರವಸೆ

Last Updated 1 ಡಿಸೆಂಬರ್ 2019, 14:08 IST
ಅಕ್ಷರ ಗಾತ್ರ

ಹುಣಸೂರು: ‘ಹುಣಸೂರು ಉಪವಿಭಾಗವನ್ನು ಜಿಲ್ಲೆಯನ್ನಾಗಿ ಮಾಡುವುದೇ ನನ್ನ ಮೊದಲ ಆದ್ಯತೆಯಾಗಿದ್ದು, ಆ ಜಿಲ್ಲೆಗೆ ದೇವರಾಜ ಅರಸು ಎಂದು ಹೆಸರಿಡಲಾಗುವುದು’ ಎಂದು ಬಿಜೆಪಿ ಅಭ್ಯರ್ಥಿ ಅಡಗೂರು ಎಚ್‌.ವಿಶ್ವನಾಥ್ ಶನಿವಾರ ಇಲ್ಲಿ ಹೇಳಿದರು.

‘ಆಡಳಿತಾತ್ಮಕ ಸಮಸ್ಯೆ ನಿವಾರಿಸುವುದಕ್ಕಾಗಿ ಪ್ರತ್ಯೇಕ ಜಿಲ್ಲೆ ಬೇಕಿದ್ದು, ಆ ಕನಸನ್ನು ನನಸು ಮಾಡುತ್ತೇನೆ’ ಎಂದು ಪುನರುಚ್ಚರಿಸಿದರು.

‘ಅರಸು ಅವರಂಥ ನಾಯಕರನ್ನು ಕೊಡುಗೆಯಾಗಿ ನೀಡಿದ ಕ್ಷೇತ್ರ ಹುಣಸೂರು. ಸಾಮಾಜಿಕ ನ್ಯಾಯ ಕಲ್ಪಿಸುವ ಬದ್ಧತೆ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT