ಹುಣಸೂರು: ‘ಹುಣಸೂರು ಉಪವಿಭಾಗವನ್ನು ಜಿಲ್ಲೆಯನ್ನಾಗಿ ಮಾಡುವುದೇ ನನ್ನ ಮೊದಲ ಆದ್ಯತೆಯಾಗಿದ್ದು, ಆ ಜಿಲ್ಲೆಗೆ ದೇವರಾಜ ಅರಸು ಎಂದು ಹೆಸರಿಡಲಾಗುವುದು’ ಎಂದು ಬಿಜೆಪಿ ಅಭ್ಯರ್ಥಿ ಅಡಗೂರು ಎಚ್.ವಿಶ್ವನಾಥ್ ಶನಿವಾರ ಇಲ್ಲಿ ಹೇಳಿದರು.
‘ಆಡಳಿತಾತ್ಮಕ ಸಮಸ್ಯೆ ನಿವಾರಿಸುವುದಕ್ಕಾಗಿ ಪ್ರತ್ಯೇಕ ಜಿಲ್ಲೆ ಬೇಕಿದ್ದು, ಆ ಕನಸನ್ನು ನನಸು ಮಾಡುತ್ತೇನೆ’ ಎಂದು ಪುನರುಚ್ಚರಿಸಿದರು.
‘ಅರಸು ಅವರಂಥ ನಾಯಕರನ್ನು ಕೊಡುಗೆಯಾಗಿ ನೀಡಿದ ಕ್ಷೇತ್ರ ಹುಣಸೂರು. ಸಾಮಾಜಿಕ ನ್ಯಾಯ ಕಲ್ಪಿಸುವ ಬದ್ಧತೆ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ್ದೇನೆ’ ಎಂದರು.