ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಇದುವರೆಗೆ 96 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಶನಿವಾರ ನಾಮಪತ್ರ ಸಲ್ಲಿಸಿದವರಲ್ಲಿ ಹೊಸಕೋಟೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ, ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್, ವಿಜಯನಗರದಜೆಡಿಎಸ್ ಅಭ್ಯರ್ಥಿ ಎನ್.ಬಿ.ನಬಿ ಸೇರಿದ್ದಾರೆ.
ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಬಹುತೇಕ ಅಭ್ಯರ್ಥಿಗಳು ಅಂದೇ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ 7 ಮತ್ತು ಜೆಡಿಎಸ್ 3 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇನ್ನಷ್ಟೇ ಪ್ರಕಟಿಸಬೇಕಿದೆ.