ಸದ್ಯವೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದ ಯಡಿಯೂರಪ್ಪ, ಗುರುವಾರ ತಮ್ಮ ಮಾತಿನ ಧಾಟಿ ಬದಲಿಸಿದ್ದು, ಸದ್ಯಕ್ಕೆ ವಿಸ್ತರಣೆ ಅನುಮಾನ ಎಂಬ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ‘ಅಮಿತ್ ಶಾ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನೂ ನಾಲ್ಕೈದು ದಿನ ಅವರು ಚರ್ಚೆಗೆ ಲಭ್ಯವಿರುವುದಿಲ್ಲ. ಪ್ರಚಾರ ಮುಗಿಸಿದ ನಂತರ ಅವರನ್ನು ಭೇಟಿಯಾಗಿ, ಸಚಿವ ಸಂಪುಟ ವಿಸ್ತರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.