ಬೆಂಗಳೂರು: ಜೂನ್ 14ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಆರ್.ಶಂಕರ್ ಮತ್ತು ಎಚ್.ನಾಗೇಶ್ ಅವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಲಾಗಿದೆ.
ಎಚ್.ನಾಗೇಶ್ ಅವರಿಗೆ ಸಣ್ಣ ಕೈಗಾರಿಕೆ (ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ), ಆರ್.ಶಂಕರ್ ಅವರಿಗೆ ಪೌರಾಡಳಿತ ಖಾತೆ (ನಗರಾಭಿವೃದ್ಧಿ ಇಲಾಖೆ) ಹೊಣೆ ನೀಡಲಾಗಿದೆ. ಪ್ರಮಾಣ ವಚನ ಸ್ವೀಕರಿಸಿ ಹತ್ತು ದಿನಗಳ ಬಳಿಕ ಖಾತೆ ಹಂಚಿಕೆ ಮಾಡಲಾಗಿದೆ.
ಸಣ್ಣ ಕೈಗಾರಿಕಾಖಾತೆ ನಿರ್ವಹಿಸುತ್ತಿದ್ದಎಸ್.ಆರ್.ಶ್ರೀನಿವಾಸ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ನೀಡಲಾಗಿದೆ.
ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಆರ್.ಶಂಕರ್, ಮೈತ್ರಿ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವರಾಗಿದ್ದಾರೆ. ಮುಳಬಾಗಲು ವಿಧಾನಸಭಾ ಕ್ಷೇತ್ರದ ಎಚ್.ನಾಗೇಶ್, ಮೊದಲ ಬಾರಿಗೆ ಸಚಿವರಾಗಿದ್ದಾರೆ.