<p><strong>ಬೆಂಗಳೂರು:</strong> ರಾಜ್ಯದ ವಿವಿಧೆಡೆ ಬುಧವಾರ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 181 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಮೃತರ ಸಂಖ್ಯೆ ಐದಕ್ಕೇರಿದೆ. 28 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.</p>.<p>ಕಲಬುರ್ಗಿಯಲ್ಲಿ 65 ವರ್ಷದ ವ್ಯಕ್ತಿಯೊಬ್ಬರು ಕೋವಿಡ್-19ಕ್ಕೆ ಬಲಿಯಾಗಿದ್ದಾರೆ. ಮೃತರ ತಾಯಿಗೂ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಲಾಗುತ್ತಿದೆ. ಈವರೆಗೆ ಕಲಬುರ್ಗಿಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.</p>.<p>ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೂ ಕೋವಿಡ್-19 ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4ಕ್ಕೆ ಏರಿದೆ. ತಬ್ಲಿಗಿಜಮಾತ್ ಧರ್ಮಸಭೆಗೆ ತೆರಳಿದ್ದ ಜಿಲ್ಲೆಯ 7 ಮಂದಿಯನ್ನು ಪತ್ತೆಹಚ್ಚಲಾಗಿದೆ. ಈ ಪೈಕಿ ನಾಲ್ವರಲ್ಲಿ ಸೋಂಕು ದೃಢಪಟ್ಟಿದೆ.</p>.<p>ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯ ವಕ್ಫ್ ಮಂಡಳಿಯು ಮಸೀದಿಗಳಲ್ಲಿ ಸಮೂಹ ಪ್ರಾರ್ಥನೆ ಮತ್ತು ಕಬ್ರಸ್ತಾನ್ (ಮುಸ್ಲಿಂ ಸ್ಮಶಾನ) ಭೇಟಿಗೆ ಅವಕಾಶಅವಕಾಶ ನೀಡಬಾರದು ಎಂದು ಸೂಚಿಸಿದೆ. ಗುರುವಾರ ಆಚರಿಸುವ ಶಾಬ್-ಎ-ಬರಾತ್ ವೇಳೆ ಸಾರ್ವಜನಿಕ ಭೇಟಿ ಸಲ್ಲದು ಎಂದು ಸೂಚಿಸಿದೆ.</p>.<p>ಕೋವಿಡ್-19 ಕುರಿತು ಹೆಚ್ಚಿನ ಮಾಹಿತಿಗೆ ಆರೋಗ್ಯ ಸಹಾಯವಾಣಿ ಸಂಖ್ಯೆ 104 ಅಥವಾ 97456 97456 ಸಂಪರ್ಕಿಸಿ.</p>.<p>ಮಂಗಳವಾರ ಸಂಜೆ (ಏ.7) 5ರಿಂದ ಬುಧವಾರ (ಏ.8) ಮಧ್ಯಾಹ್ನ 12ರವರೆಗೆ ವರದಿಯಾಗಿರುವ ಪ್ರಕರಣಗಳ ವಿವರ ಇಂತಿದೆ...</p>.<p><strong>ಪ್ರಕರಣ 176-</strong>ಉತ್ತರ ಕನ್ನಡ ಜಿಲ್ಲೆಯ 26 ವರ್ಷದ ಮಹಿಳೆ. ತೀವ್ರತರವಾದ ಉಸಿರಾಟ ತೊಂದರೆ ಅನುಭವಿಸುತ್ತಿದ್ದರು ದುಬೈನಿಂದ ಬಂದವರೊಡನೆ ಒಡನಾಟವಿತ್ತು. ಭಟ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p><strong>ಪ್ರಕರಣ 177-</strong> ಕಲಬುರ್ಗಿಯ 65 ವರ್ಷದ ಪುರುಷ. ತೀವ್ರತರದ ಉಸಿರಾಟ ತೊಂದರೆ ಅನುಭವಿಸುತ್ತಿದ್ದರು. ಕಲಬುರ್ಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.</p>.<p><strong>ಪ್ರಕರಣ 178- </strong>ಕಲಬುರ್ಗಿಯ 72 ವರ್ಷದ ಮಹಿಳೆ. ಕಲಬುರ್ಗಿಯಲ್ಲಿ ನಿಧನರಾದ ಪ್ರಕರಣ 177ರ ಪುರುಷನ ತಾಯಿ. ಕಲಬುರ್ಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p><strong>ಪ್ರಕರಣ 179-</strong> ಮಂಡ್ಯ ಜಿಲ್ಲೆಯ 35 ವರ್ಷದ ಪುರುಷ. ಸೋಂಕಿತರೊಂದಿಗೆ ಸಂಬಂಧವಿತ್ತು.. ಮಂಡ್ಯದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p><strong>ಪ್ರಕರಣ 180- </strong>ಚಿಕ್ಕಬಳ್ಳಾಪುರ ಜಿಲ್ಲೆಯ 23 ವರ್ಷದ ಪುರುಷ. ದೆಹಲಿಗೆ ಪ್ರಯಾಣ ಬೆಳೆಸಿದ್ದ ಮಾಹಿತಿಯಿದೆ. ಚಿಕ್ಕಬಳ್ಳಾಪುರದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p><strong>ಪ್ರಕರಣ 181-</strong> ಬೆಂಗಳೂರಿನ 27 ವರ್ಷದ ಮಹಿಳೆ. ದೆಹಲಿಗೆ ಪ್ರಯಾಣ ಬೆಳೆಸಿದ್ದ ಮಾಹಿತಿಯಿದೆ. ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ವಿವಿಧೆಡೆ ಬುಧವಾರ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 181 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಮೃತರ ಸಂಖ್ಯೆ ಐದಕ್ಕೇರಿದೆ. 28 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.</p>.<p>ಕಲಬುರ್ಗಿಯಲ್ಲಿ 65 ವರ್ಷದ ವ್ಯಕ್ತಿಯೊಬ್ಬರು ಕೋವಿಡ್-19ಕ್ಕೆ ಬಲಿಯಾಗಿದ್ದಾರೆ. ಮೃತರ ತಾಯಿಗೂ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಲಾಗುತ್ತಿದೆ. ಈವರೆಗೆ ಕಲಬುರ್ಗಿಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.</p>.<p>ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೂ ಕೋವಿಡ್-19 ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4ಕ್ಕೆ ಏರಿದೆ. ತಬ್ಲಿಗಿಜಮಾತ್ ಧರ್ಮಸಭೆಗೆ ತೆರಳಿದ್ದ ಜಿಲ್ಲೆಯ 7 ಮಂದಿಯನ್ನು ಪತ್ತೆಹಚ್ಚಲಾಗಿದೆ. ಈ ಪೈಕಿ ನಾಲ್ವರಲ್ಲಿ ಸೋಂಕು ದೃಢಪಟ್ಟಿದೆ.</p>.<p>ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯ ವಕ್ಫ್ ಮಂಡಳಿಯು ಮಸೀದಿಗಳಲ್ಲಿ ಸಮೂಹ ಪ್ರಾರ್ಥನೆ ಮತ್ತು ಕಬ್ರಸ್ತಾನ್ (ಮುಸ್ಲಿಂ ಸ್ಮಶಾನ) ಭೇಟಿಗೆ ಅವಕಾಶಅವಕಾಶ ನೀಡಬಾರದು ಎಂದು ಸೂಚಿಸಿದೆ. ಗುರುವಾರ ಆಚರಿಸುವ ಶಾಬ್-ಎ-ಬರಾತ್ ವೇಳೆ ಸಾರ್ವಜನಿಕ ಭೇಟಿ ಸಲ್ಲದು ಎಂದು ಸೂಚಿಸಿದೆ.</p>.<p>ಕೋವಿಡ್-19 ಕುರಿತು ಹೆಚ್ಚಿನ ಮಾಹಿತಿಗೆ ಆರೋಗ್ಯ ಸಹಾಯವಾಣಿ ಸಂಖ್ಯೆ 104 ಅಥವಾ 97456 97456 ಸಂಪರ್ಕಿಸಿ.</p>.<p>ಮಂಗಳವಾರ ಸಂಜೆ (ಏ.7) 5ರಿಂದ ಬುಧವಾರ (ಏ.8) ಮಧ್ಯಾಹ್ನ 12ರವರೆಗೆ ವರದಿಯಾಗಿರುವ ಪ್ರಕರಣಗಳ ವಿವರ ಇಂತಿದೆ...</p>.<p><strong>ಪ್ರಕರಣ 176-</strong>ಉತ್ತರ ಕನ್ನಡ ಜಿಲ್ಲೆಯ 26 ವರ್ಷದ ಮಹಿಳೆ. ತೀವ್ರತರವಾದ ಉಸಿರಾಟ ತೊಂದರೆ ಅನುಭವಿಸುತ್ತಿದ್ದರು ದುಬೈನಿಂದ ಬಂದವರೊಡನೆ ಒಡನಾಟವಿತ್ತು. ಭಟ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p><strong>ಪ್ರಕರಣ 177-</strong> ಕಲಬುರ್ಗಿಯ 65 ವರ್ಷದ ಪುರುಷ. ತೀವ್ರತರದ ಉಸಿರಾಟ ತೊಂದರೆ ಅನುಭವಿಸುತ್ತಿದ್ದರು. ಕಲಬುರ್ಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.</p>.<p><strong>ಪ್ರಕರಣ 178- </strong>ಕಲಬುರ್ಗಿಯ 72 ವರ್ಷದ ಮಹಿಳೆ. ಕಲಬುರ್ಗಿಯಲ್ಲಿ ನಿಧನರಾದ ಪ್ರಕರಣ 177ರ ಪುರುಷನ ತಾಯಿ. ಕಲಬುರ್ಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p><strong>ಪ್ರಕರಣ 179-</strong> ಮಂಡ್ಯ ಜಿಲ್ಲೆಯ 35 ವರ್ಷದ ಪುರುಷ. ಸೋಂಕಿತರೊಂದಿಗೆ ಸಂಬಂಧವಿತ್ತು.. ಮಂಡ್ಯದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p><strong>ಪ್ರಕರಣ 180- </strong>ಚಿಕ್ಕಬಳ್ಳಾಪುರ ಜಿಲ್ಲೆಯ 23 ವರ್ಷದ ಪುರುಷ. ದೆಹಲಿಗೆ ಪ್ರಯಾಣ ಬೆಳೆಸಿದ್ದ ಮಾಹಿತಿಯಿದೆ. ಚಿಕ್ಕಬಳ್ಳಾಪುರದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p><strong>ಪ್ರಕರಣ 181-</strong> ಬೆಂಗಳೂರಿನ 27 ವರ್ಷದ ಮಹಿಳೆ. ದೆಹಲಿಗೆ ಪ್ರಯಾಣ ಬೆಳೆಸಿದ್ದ ಮಾಹಿತಿಯಿದೆ. ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>