<p><strong>ಬೆಂಗಳೂರು:</strong> ವಿಮಾನ ಮೂಲಕ ರಾಜ್ಯಕ್ಕೆ ಬರುವ ಮಹಾರಾಷ್ಟ್ರ , ಗುಜರಾತ್, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಜನರಿಗೆ ನಿರ್ಬಂಧ ಹೇರಲು ಸಚಿವ ಸಂಪುಟ ತೀರ್ಮಾನಿಸಿದೆ.</p>.<p>ಮಹಾರಾಷ್ಟ್ರ , ಗುಜರಾತ್, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಬರುವ ಎಲ್ಲ ವಿಮಾನಗಳನ್ನು ಕರ್ನಾಟಕ ತಾತ್ಕಾಲಿಕ ಸ್ಥಗಿತಗೊಳಿಸಿದೆ. ಮೇ. 25ರಂದು ದೇಶದಲ್ಲಿ ವಿಮಾನ ಸಂಚಾರ ಆರಂಭವಾದ ನಂತರ ಕೋವಿಡ್-19 ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ.</p>.<p>ಗುಜರಾತ್, ತಮಿಳುನಾಡು ಮತ್ತು ಮಹಾರಾಷ್ಟ್ರದ ಜನರು ರಸ್ತೆ ಮೂಲಕವೂ ರಾಜ್ಯಕ್ಕೆ ಬರಬಾರದು ಎಂದು ನಿರ್ಬಂಧ ವಿಧಿಸಿದ್ದು ಮುಂದಿನ ನಿರ್ಧಾರ ಕೈಗೊಳ್ಳುವವರೆಗೆ ಇದೇ ನಿರ್ಧಾರಮುಂದುವರಿಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ.</p>.<p>ಈ ರಾಜ್ಯಗಳಿಂದ ಬಂದ ಜನರಿಂದಾಗಿ ಸೋಂಕು ಲಕ್ಷಣಗಳು ಇಲ್ಲದೇ ಇರುವ ರೋಗಿಗಳ ಸಂಖ್ಯೆ ಜಾಸ್ತಿಯಾಗಿದೆ. ಹಾಗಾಗಿ ಕ್ವಾರಂಟೈನ್ ವ್ಯವಸ್ಥೆಯ ಹೊರೆಯೂ ಹೆಚ್ಚಾಗಿದೆ. ಈ ರಾಜ್ಯಗಳಿಂದ ಬರುವ ಜನರ ಸಂಖ್ಯೆ ಹೆಚ್ಚು ಇರುವುದರಿಂದ ನಿಗದಿತ ಸಮಯಕ್ಕೆ ಸೋಂಕು ಪರೀಕ್ಷೆ ನಡೆಸಲಾಗುತ್ತಿಲ್ಲ. ಹೊರಗಿನ ರಾಜ್ಯಗಳಿಂದ ಬರುವ ಜನರು ಕಡ್ಡಾಯ ಕ್ವಾರಂಟೈನ್ ಮುಗಿಸಿ ಮನೆಗೆ ಹೊರಟ ನಂತರ ಸರ್ಕಾರ ಈ ನಿರ್ಬಂಧಗಳನ್ನು ಸಡಿಲಿಕೆ ಮಾಡಲಿದೆ.</p>.<p>ಮಹಾರಾಷ್ಟ್ರದಿಂದ ಜನರು ನಡೆದುಕೊಂಡು ಬರದಂತೆ ತಡೆಯಲುಗಡಿ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸುವಂತೆ ಪೊಲೀಸರಿಗೆ ಆದೇಶ ನೀಡಲಾಗಿದೆ. ಭೀಮಾನದಿ ಒಣಗಿರುವ ಕಾರಣ ಜನರು ಕಾಲ್ನಡಿಗೆಯಿಂದಲೇ ಕರ್ನಾಟಕಕ್ಕೆ ಬರುವ ಸಾಧ್ಯತೆ ಇದೆ ಎಂದು ಎಂದು ಸಚಿವರು ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಮಾನ ಮೂಲಕ ರಾಜ್ಯಕ್ಕೆ ಬರುವ ಮಹಾರಾಷ್ಟ್ರ , ಗುಜರಾತ್, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಜನರಿಗೆ ನಿರ್ಬಂಧ ಹೇರಲು ಸಚಿವ ಸಂಪುಟ ತೀರ್ಮಾನಿಸಿದೆ.</p>.<p>ಮಹಾರಾಷ್ಟ್ರ , ಗುಜರಾತ್, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಬರುವ ಎಲ್ಲ ವಿಮಾನಗಳನ್ನು ಕರ್ನಾಟಕ ತಾತ್ಕಾಲಿಕ ಸ್ಥಗಿತಗೊಳಿಸಿದೆ. ಮೇ. 25ರಂದು ದೇಶದಲ್ಲಿ ವಿಮಾನ ಸಂಚಾರ ಆರಂಭವಾದ ನಂತರ ಕೋವಿಡ್-19 ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ.</p>.<p>ಗುಜರಾತ್, ತಮಿಳುನಾಡು ಮತ್ತು ಮಹಾರಾಷ್ಟ್ರದ ಜನರು ರಸ್ತೆ ಮೂಲಕವೂ ರಾಜ್ಯಕ್ಕೆ ಬರಬಾರದು ಎಂದು ನಿರ್ಬಂಧ ವಿಧಿಸಿದ್ದು ಮುಂದಿನ ನಿರ್ಧಾರ ಕೈಗೊಳ್ಳುವವರೆಗೆ ಇದೇ ನಿರ್ಧಾರಮುಂದುವರಿಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ.</p>.<p>ಈ ರಾಜ್ಯಗಳಿಂದ ಬಂದ ಜನರಿಂದಾಗಿ ಸೋಂಕು ಲಕ್ಷಣಗಳು ಇಲ್ಲದೇ ಇರುವ ರೋಗಿಗಳ ಸಂಖ್ಯೆ ಜಾಸ್ತಿಯಾಗಿದೆ. ಹಾಗಾಗಿ ಕ್ವಾರಂಟೈನ್ ವ್ಯವಸ್ಥೆಯ ಹೊರೆಯೂ ಹೆಚ್ಚಾಗಿದೆ. ಈ ರಾಜ್ಯಗಳಿಂದ ಬರುವ ಜನರ ಸಂಖ್ಯೆ ಹೆಚ್ಚು ಇರುವುದರಿಂದ ನಿಗದಿತ ಸಮಯಕ್ಕೆ ಸೋಂಕು ಪರೀಕ್ಷೆ ನಡೆಸಲಾಗುತ್ತಿಲ್ಲ. ಹೊರಗಿನ ರಾಜ್ಯಗಳಿಂದ ಬರುವ ಜನರು ಕಡ್ಡಾಯ ಕ್ವಾರಂಟೈನ್ ಮುಗಿಸಿ ಮನೆಗೆ ಹೊರಟ ನಂತರ ಸರ್ಕಾರ ಈ ನಿರ್ಬಂಧಗಳನ್ನು ಸಡಿಲಿಕೆ ಮಾಡಲಿದೆ.</p>.<p>ಮಹಾರಾಷ್ಟ್ರದಿಂದ ಜನರು ನಡೆದುಕೊಂಡು ಬರದಂತೆ ತಡೆಯಲುಗಡಿ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸುವಂತೆ ಪೊಲೀಸರಿಗೆ ಆದೇಶ ನೀಡಲಾಗಿದೆ. ಭೀಮಾನದಿ ಒಣಗಿರುವ ಕಾರಣ ಜನರು ಕಾಲ್ನಡಿಗೆಯಿಂದಲೇ ಕರ್ನಾಟಕಕ್ಕೆ ಬರುವ ಸಾಧ್ಯತೆ ಇದೆ ಎಂದು ಎಂದು ಸಚಿವರು ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>