ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಸಮೀಕ್ಷೆ: ಸರ್ಕಾರ, ನಾಯಕರಲ್ಲಿ ಗೊಂದಲ

Last Updated 5 ಅಕ್ಟೋಬರ್ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿರುವ ನೆರೆ ಹಾನಿಯ ಸಮೀಕ್ಷೆ ವರದಿ ಬಗ್ಗೆ ಸರ್ಕಾರ ಹಾಗೂ ಬಿಜೆಪಿ ನಾಯಕರ ನಡುವೆ ಗೊಂದಲ ಮೂಡಿದೆ.

ನೆರೆ ಹಾನಿ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಲಮಟ್ಟಿಯಲ್ಲಿ ಹೇಳಿದ್ದರೆ, ಸಮೀಕ್ಷೆ ಮುಗಿದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಬೆಂಗಳೂರಿನಲ್ಲಿ‌ಹೇಳಿದ್ದಾರೆ. ಕೇಂದ್ರಕ್ಕೆ ವರದಿ ಸಲ್ಲಿಕೆಯಾಗುವುದು ಇನ್ನೂ ಬಾಕಿ ಇದೆ ಎಂದು ಗಂಗಾವತಿಯಲ್ಲಿಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಒಬ್ಬೊಬ್ಬರು ಒಂದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ನೆರೆ ಹಾನಿ ಸಮೀಕ್ಷೆ ಪೂರ್ಣಗೊಂಡಿದ್ದು, ಮನೆ ಹಾನಿಗೆ ಸಂಬಂಧಿಸಿದಂತೆ ಸ್ವಲ್ಪ ಗೊಂದಲವಿದೆ. ಅದನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ₹34 ಸಾವಿರ ಕೋಟಿ ಹಾನಿಯಾಗಿದೆ ಎಂದು ಕರಡು ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದ್ದು, ಇನ್ನೂ ಹೆಚ್ಚು ಹಾನಿಯಾಗಿದೆ’ ಎಂದು ಯಡಿಯೂರಪ್ಪ ಹೇಳಿದರು.

ಸಮೀಕ್ಷೆ ಮಗಿದಿಲ್ಲ: ‘ರಾಜ್ಯದಲ್ಲಿ ಮೂರು ಹಂತದಲ್ಲಿ ನೆರೆ ಸಂಭವಿಸಿದ್ದು, ರಾಜ್ಯ ಸರ್ಕಾರ ಇದುವರೆಗೆ ಪ್ರಾಥಮಿಕ ಸಮೀಕ್ಷೆಯ ವರದಿ ಸಿದ್ಧಪಡಿಸಿಕೊಟ್ಟಿದೆ. ರಸ್ತೆಗೆ ಆಗಿರುವ ಹಾನಿ ಸಹಿತ ಅಂತಿಮ ಸಮೀಕ್ಷೆಗಳನ್ನುನೆರೆ ಪೂರ್ತಿ ಕಡಿಮೆಯಾದ ಬಳಿಕ ಮಾಡಬೇಕಾಗಿದ್ದು, ಅದಿನ್ನೂ ನಡೆದಿಲ್ಲ. ಇನ್ನೂ ಅಧಿಕೃತ ವರದಿ ಸಿದ್ಧವಾಗಿಲ್ಲ’ ಎಂದುನಳಿನ್‌ ಕುಮಾರ್ ಕಟೀಲ್‌ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT