ಚನ್ನರಾಯಪಟ್ಟಣ: ಉತ್ತರ ಕರ್ನಾಟಕ ಭಾಗದ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಶ್ರೀಕ್ಷೇತ್ರ ಶ್ರವಣಬೆಳಗೊಳದ ಜೈನ ಮಠದ ವತಿಯಿಂದ ಆಹಾರ ಸಾಮಗ್ರಿ, ಔಷಧಿ ಸರಬರಾಜು ಮಾಡಲು ₹ 25 ಲಕ್ಷ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹ 10 ಲಕ್ಷ ಸೇರಿ 35 ಲಕ್ಷ ದೇಣಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಜೈನಮಠದ ಆಡಳಿತ ಮಂಡಳಿ ತಿಳಿಸಿದೆ.