ಹೊಸ ಬಡ್ತಿ ಮೀಸಲು ಕಾಯ್ದೆ ಅನ್ವಯ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿತ್ತು. ಕೋರ್ಟ್ ತೀರ್ಪಿನ ಪ್ರತಿ ಶನಿವಾರ ತಲುಪಿದ್ದು, ಅದರಲ್ಲಿರುವ ಅಂಶಗಳನ್ನು ಉಲ್ಲೇಖಿಸಿ ಅದರಂತೆ ಕ್ರಮ ತೆಗೆದುಕೊಳ್ಳಲು ಮಂಗಳವಾರ ಸುತ್ತೋಲೆ ಹೊರಡಿಸಲಾಗುವುದು ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.