ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಪೊಲೀಸ್ ಕಮಿಷನರ್‌ ಎತ್ತಂಗಡಿ; ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

Last Updated 2 ಆಗಸ್ಟ್ 2019, 14:35 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರ‌ಪೊಲೀಸ್‌ ಆಯುಕ್ತ ಅಲೋಕ್ ಕುಮಾರ್‌ ಅವರನ್ನು ಕೇವಲ ಒಂದೂವರೆ ತಿಂಗಳೊಳಗೆಯೇ ಎತ್ತಂಗಡಿ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಎಡಿಜಿಪಿ ಭಾಸ್ಕರ ರಾವ್ ಅವರನ್ನು ನಿಯೋಜಿಸಲಾಗಿದೆ.

ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ದೋಸ್ತಿ ಸರ್ಕಾರದಿಂದ ಸುನಿಲ್‌ ಕುಮಾರ್ ಜಾಗದಲ್ಲಿಅಲೋಕ್‌ ಕುಮಾರ್‌ಗೆ ನಿಯೋಜನೆಗೊಂಡಾಗ ಇಬ್ಬರು ಹಿರಿಯ ಐಪಿಎಸ್‌ ಅಧಿಕಾರಿಗಳಾದಭಾಸ್ಕರ ರಾವ್‌ ಮತ್ತು ಅಲೋಕ್‌ ಮೋಹನ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಬಡ್ತಿ ನೀಡಿದ ತಕ್ಷಣ ಮಹತ್ವದ ಹುದ್ದೆಗೆ ನೇಮಕಗೊಳ್ಳುವ ಪರಿಪಾಠ ಇಲ್ಲವಾದರೂ, ಅಲೋಕ್‌ ಕುಮಾರ್‌ಗೆ ಅದು ಲಭಿಸಿತ್ತು. ಅತೃಪ್ತ ಶಾಸಕರ ರಾಜೀನಾಮೆ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿಲ್ಲ ಎಂಬ ಬಿಜೆಪಿಯ ಬಹಿರಂಗ ಆಕ್ಷೇಪಕ್ಕೂ ಅವರು ಗುರಿಯಾಗಿದ್ದರು. ಎಲ್ಲದರ ಫಲವಾಗಿ ಅವರ ಎತ್ತಂಗಡಿಯಾಗಿದ್ದು, ಅವರನ್ನು ಕೆಎಎಸ್‌ಆರ್‌ಪಿ ಎಡಿಜಿಪಿ ಆಗಿ ವರ್ಗಾಯಿಸಲಾಗಿದೆ.

ಭಾಸ್ಕರ ರಾವ್ ಅವರು ಕಳೆದ ಲೋಕಸಭಾ ಚುನಾವಣೆ ವೇಳೆ ದೋಸ್ತಿ ಸರ್ಕಾರವನ್ನು ಟೀಕಿಸುವ ರೀತಿಯಟ್ವೀಟ್‌ ಮಾಡಿ ವಿವಾದಕ್ಕೆ ಒಳಗಾಗಿದ್ದರು. ಇದೀಗ ಯಡಿಯೂರಪ್ಪ ಸರ್ಕಾರ ಅವರಿಗೆ ಪ್ರಮುಖ ಹೊಣೆಗಾರಿಕೆ ನೀಡಿದೆ.

ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಹಬ್ಬಿತ್ತು. ಆಗ ಹೇಮಂತ್‌ ನಿಂಬಾಳ್ಕರ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರ್ಗಾಯಿಸಿ ಅಂಜಲಿ ಅವರನ್ನು ಸಮಾಧಾನಪಡಿಸುವ ಕೆಲಸ ಮಾಡಲಾಗಿತ್ತು. ಆದರೆ ಗುರುವಾರ ಮತ್ತೆ ಅವರನ್ನು ವರ್ಗಾಯಿಸಿ ಸ್ಥಾನ ತೋರಿಸಿರಲಿಲ್ಲ. ಶುಕ್ರವಾರ ಅವರನ್ನುಬೆಂಗಳೂರು ನಗರ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿ ನಿಯೋಜಿಸಲಾಗಿದೆ.

ಹಿರಿಯ ಐಎಎಸ್‌ ಅಧಿಕಾರಿ ಪಿ.ರವಿಕುಮಾರ್‌ ಅವರನ್ನು ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನಿಯೋಜಿಸಲಾಗಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಯನ್ನಾಗಿ ನಿಯೋಜಿಸಲಾಗಿದ್ದು, ಕೆಎಸ್‌ಆರ್‌ಟಿಸಿ ಎಂಡಿ ಹುದ್ದೆಯನ್ನೂ ಹೆಚ್ಚುವರಿಯಾಗಿ ನಿಭಾಯಿಸಲಿದ್ದಾರೆ.

ಇತರ ಐಪಿಎಸ್‌ ವರ್ಗಾವಣೆ:

ಉಮೇಶ್‌ ಕುಮಾರ್–ಐಜಿಪಿ, ಹೆಚ್ಚುವರಿಪೊಲೀಸ್‌ ಕಮಿಷನರ್‌ , ಬೆಂಗಳೂರು ನಗರ ಪಶ್ಚಿಮ (ವರ್ಗಾವಣೆ ಹಿಂಪಡೆದು ಮತ್ತೆ ಆದೇಶ; ಹಿಂದಿನ ಸ್ಥಾನದಲ್ಲೇ ಮುಂದುವರಿಕೆ)

ಡಾ.ಬಿ.ಆರ್‌.ರವಿಕಾಂತೇ ಗೌಡ–ಡಿಐಜಿಪಿ, ಜಂಟಿ ಪೊಲೀಸ್ ಕಮಿಷನರ್‌,ಬೆಂಗಳೂರು ನಗರ ಪಶ್ಚಿಮ

ಆರ್‌.ಚೇತನ್‌–ಎಸ್‌ಪಿ, ಕರಾವಳಿ ರಕ್ಷಣಾ ಪೊಲೀಸ್‌, ಉಡುಪಿ

ಡಿ.ದೇವರಾಜ–ಎಸ್‌ಪಿ, ಅಪರಾಧ ತನಿಖಾ ವಿಭಾಗ, ಬೆಂಗಳೂರು

ಡಾ.ಎಂ.ಅಶ್ವಿನಿ–ಡಿಸಿಪಿ ಗುಪ್ತಚರ, ಬೆಂಗಳೂರು ನಗರ

ಡಾ.ರಾಜ್‌ವೀರ್‌ ಪ್ರತಾಪ್‌ ಶರ್ಮಾ– ಎಡಿಜಿಪಿ, ಸಂವಹನ, ಸಾಗಣೆ ಮತ್ತು ಆಧುನೀಕರಣ, ಬೆಂಗಳೂರು

ಮಾಲಿನಿ ಕೃಷ್ಣಮೂರ್ತಿ– ಎಡಿಜಿಪಿ, ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT