ನಾಮಪತ್ರ ಹಿಂದಕ್ಕೆ ಪಡೆಯಲು ಸೋಮವಾರ ಕಡೆಯ ದಿನವಾಗಿತ್ತು. ಬೇರೆ ಯಾವುದೇ ಅಭ್ಯರ್ಥಿ ಚುನಾವಣಾ ಕಣದಲ್ಲಿ ಉಳಿದಿರಲಿಲ್ಲ. ಹೀಗಾಗಿ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯ ದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಿಸಿದರು.
ಇವರ ಪೈಕಿ ನಜೀರ್ ಪುನರಾಯ್ಕೆ ಆಗುತ್ತಿದ್ದು, ನಾಗರಾಜ್, ಶಂಕರ್, ಸುನೀಲ್ ಈ ಹಿಂದೆ ವಿಧಾನಸಭೆ ಸದಸ್ಯರಾಗಿದ್ದವರು. ಹರಿಪ್ರಸಾದ್ ರಾಜ್ಯಸಭೆ ಸದಸ್ಯರಾಗಿದ್ದವರು. ನಾಯಕ್, ಗೋವಿಂದರಾಜ್ ಅವರು ಶಾಸನಸಭೆಗೆ ಮೊದಲ ಬಾರಿಗೆ ಪ್ರವೇಶಿಸುತ್ತಿದ್ದಾರೆ.