ವಿಚಾರಣೆ ವೇಳೆ ಸರ್ಕಾರಿ ವಕೀಲರು, ‘ಎಲ್ಪಿಜಿ ಸಂಪರ್ಕ ಹೊಂದಿದರೂ ಸಿಲಿಂಡರ್ಗೆ ಹಣ ಪಾವತಿಸಲಾಗದ ಸ್ಥಿತಿಯಲ್ಲಿ ಇರುವವರಿಗೆ ಉಚಿತವಾಗಿ ಸಿಲಿಂಡರ್ ಪೂರೈಸಲು ಕಷ್ಟವಾಗುತ್ತದೆ’ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಪ್ರಧಾನ ಮಂತ್ರಿ ಉಜ್ವಲ ಹಾಗೂ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಗಳಿಗೆ ಒಳಪಡದ ಬಡವರಿಗೆ ಒಂದು ಬಾರಿಯ ಕ್ರಮದಂತೆ ಸಿಲಿಂಡರ್ ಖರೀದಿಸಲು ಸಹಾಯಧನ ನೀಡುವ ನಿಟ್ಟಿನಲ್ಲಿ ಶೀಘ್ರವೇ ನೀತಿಯೊಂದನ್ನು ರೂಪಿಸಿ ನಿರ್ಣಯ ಕೈಗೊಳ್ಳಬೇಕು. ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು’ ಎಂದು ಸೂಚಿಸಿತು.