<p><strong>ಬೆಂಗಳೂರು:</strong> ರಾಜ್ಯದಲ್ಲಿ ನಿರ್ಮಾಣದ ವಿವಿಧ ಹಂತಗಳಲ್ಲಿರುವ 9.74 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ₹10,194 ಕೋಟಿ ಅನುದಾನದ ಮಂಜೂರಾತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.</p>.<p>ವಿಧಾನಸೌಧದಲ್ಲಿ ಸೋಮವಾರ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಭರವಸೆ ನೀಡಿದರು.</p>.<p>ನಕಲಿ ದಾಖಲೆಗಳನ್ನು ನೀಡಿ ಅಕ್ರಮವಾಗಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆ ಮಾಡಿ ಸರ್ಕಾರ ₹8,000 ಕೋಟಿ ಉಳಿತಾಯ ಮಾಡಲಾಗಿದೆ. ಇದು ಶ್ಲಾಘನೀಯ ಕಾರ್ಯ. ವಸತಿ ಯೋಜನೆಗಳ ಪಾರದರ್ಶಕ ಅನುಷ್ಠಾನಕ್ಕೆ ತಾಂತ್ರಿಕ ನೂನ್ಯತೆಗಳನ್ನು ಸರಿಪಡಿಸಿ, ಅನುದಾನ ದುರುಪಯೋಗ ತಡೆಯಲು ಅಭಿವೃದ್ಧಿಪಡಿಸಿರುವ ವಿಜಿಲ್ ಆ್ಯಪ್ ತಂತ್ರಾಂಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕೊಡಗು ಪುನರ್ವಸತಿ ಯೋಜನೆಯಡಿ 115 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಪೂರ್ಣಗೊಂಡಿರುವ 405 ಮನೆಗಳನ್ನು ಅತಿ ಬೇಗನೆ ಫಲಾನುಭವಿಗಳಿಗೆ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ 1.24 ಲಕ್ಷ ನಿವೇಶನಗಳನ್ನು ಬಡವರಿಕೆಗ ವಿತರಿಸಲು ಗುರುತಿಸಲಾಗಿದೆ. ಇದಕ್ಕಾಗಿ ₹100 ಕೋಟಿ ಲಭ್ಯವಿದೆ. ನಿವೇಶಗಳನ್ನು ಅಭಿವೃದ್ಧಿಪಡಿಸಿ ಹಂಚಿಕೆ ಮಾಡಲು ಸುಮಾರು ₹1,000 ಕೋಟಿ ಅಗತ್ಯವಿದೆ ಎಂದು ವಸತಿ ಸಚಿವ ವಿಸೋಮಣ್ಣ ಹೇಳಿದರು.</p>.<p>ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಸರ್ಕಾರದ ಜಮೀನಿನಲ್ಲಿರುವ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕಿದೆ. ಕೊಳಚೆ ಅಭಿವೃದ್ಧಿ ಮಂಡಳಿಗೆ ಬದಲಾಗಿ ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ವಿಲೀನಗೊಳಿಸಿದರೆ ಕೊಳಗೇರಿಗಳ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಬಗೆಹರಿಸಬಹುದು ಎಂದು ಸಚಿವರು ಸಲಹೆ ನೀಡಿದರು.</p>.<p>ಕರ್ನಾಟಕ ಗೃಹ ಮಂಡಳಿ ವತಿಯಿಂದ ಆನೇಕಲ್ ತಾಲ್ಲೂಕು ಜಿಗಣಿ ಹೋಬಳಿಯ ಕೋನಸಂದ್ರ, ಬೊಮ್ಮಂಡಹಳ್ಳಿ, ಕಾಡುಜಕ್ಕನಹಳ್ಳಿ ಮತ್ತು ಕಸಬಾ ಹೋಬಳಿಯ ಇಂಗ್ಲವಾಡಿ, ಬಗ್ಗನದೊಡ್ಡಿ ಗ್ರಾಮಗಳಲ್ಲಿ ಪ್ರಧಾನಮಂತ್ರಿ ವಸತಿ ಬಡಾವಣೆಯನ್ನು ₹ 1264 ಕೋಟಿ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.</p>.<p>ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಡಿ 4000 ಕ್ಕಿಂತ ಹೆಚ್ಚು ದೂರುಗಳು ದಾಖಲಾಗಿದ್ದು ಸುಮಾರು 700 ಕ್ಕೂ ಹೆಚ್ಚು ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಹಾಗೂ ದೂರು ವಿಲೇವಾರಿಗೆ ಹೆಚ್ಚಿನ ಸಿಬ್ಬಂದಿಯ ಅಗತ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ನಿರ್ಮಾಣದ ವಿವಿಧ ಹಂತಗಳಲ್ಲಿರುವ 9.74 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ₹10,194 ಕೋಟಿ ಅನುದಾನದ ಮಂಜೂರಾತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.</p>.<p>ವಿಧಾನಸೌಧದಲ್ಲಿ ಸೋಮವಾರ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಭರವಸೆ ನೀಡಿದರು.</p>.<p>ನಕಲಿ ದಾಖಲೆಗಳನ್ನು ನೀಡಿ ಅಕ್ರಮವಾಗಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆ ಮಾಡಿ ಸರ್ಕಾರ ₹8,000 ಕೋಟಿ ಉಳಿತಾಯ ಮಾಡಲಾಗಿದೆ. ಇದು ಶ್ಲಾಘನೀಯ ಕಾರ್ಯ. ವಸತಿ ಯೋಜನೆಗಳ ಪಾರದರ್ಶಕ ಅನುಷ್ಠಾನಕ್ಕೆ ತಾಂತ್ರಿಕ ನೂನ್ಯತೆಗಳನ್ನು ಸರಿಪಡಿಸಿ, ಅನುದಾನ ದುರುಪಯೋಗ ತಡೆಯಲು ಅಭಿವೃದ್ಧಿಪಡಿಸಿರುವ ವಿಜಿಲ್ ಆ್ಯಪ್ ತಂತ್ರಾಂಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕೊಡಗು ಪುನರ್ವಸತಿ ಯೋಜನೆಯಡಿ 115 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಪೂರ್ಣಗೊಂಡಿರುವ 405 ಮನೆಗಳನ್ನು ಅತಿ ಬೇಗನೆ ಫಲಾನುಭವಿಗಳಿಗೆ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಗ್ರಾಮೀಣ ಪ್ರದೇಶಗಳಲ್ಲಿ 1.24 ಲಕ್ಷ ನಿವೇಶನಗಳನ್ನು ಬಡವರಿಕೆಗ ವಿತರಿಸಲು ಗುರುತಿಸಲಾಗಿದೆ. ಇದಕ್ಕಾಗಿ ₹100 ಕೋಟಿ ಲಭ್ಯವಿದೆ. ನಿವೇಶಗಳನ್ನು ಅಭಿವೃದ್ಧಿಪಡಿಸಿ ಹಂಚಿಕೆ ಮಾಡಲು ಸುಮಾರು ₹1,000 ಕೋಟಿ ಅಗತ್ಯವಿದೆ ಎಂದು ವಸತಿ ಸಚಿವ ವಿಸೋಮಣ್ಣ ಹೇಳಿದರು.</p>.<p>ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಸರ್ಕಾರದ ಜಮೀನಿನಲ್ಲಿರುವ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕಿದೆ. ಕೊಳಚೆ ಅಭಿವೃದ್ಧಿ ಮಂಡಳಿಗೆ ಬದಲಾಗಿ ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ವಿಲೀನಗೊಳಿಸಿದರೆ ಕೊಳಗೇರಿಗಳ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಬಗೆಹರಿಸಬಹುದು ಎಂದು ಸಚಿವರು ಸಲಹೆ ನೀಡಿದರು.</p>.<p>ಕರ್ನಾಟಕ ಗೃಹ ಮಂಡಳಿ ವತಿಯಿಂದ ಆನೇಕಲ್ ತಾಲ್ಲೂಕು ಜಿಗಣಿ ಹೋಬಳಿಯ ಕೋನಸಂದ್ರ, ಬೊಮ್ಮಂಡಹಳ್ಳಿ, ಕಾಡುಜಕ್ಕನಹಳ್ಳಿ ಮತ್ತು ಕಸಬಾ ಹೋಬಳಿಯ ಇಂಗ್ಲವಾಡಿ, ಬಗ್ಗನದೊಡ್ಡಿ ಗ್ರಾಮಗಳಲ್ಲಿ ಪ್ರಧಾನಮಂತ್ರಿ ವಸತಿ ಬಡಾವಣೆಯನ್ನು ₹ 1264 ಕೋಟಿ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.</p>.<p>ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಡಿ 4000 ಕ್ಕಿಂತ ಹೆಚ್ಚು ದೂರುಗಳು ದಾಖಲಾಗಿದ್ದು ಸುಮಾರು 700 ಕ್ಕೂ ಹೆಚ್ಚು ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಹಾಗೂ ದೂರು ವಿಲೇವಾರಿಗೆ ಹೆಚ್ಚಿನ ಸಿಬ್ಬಂದಿಯ ಅಗತ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>