ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ಗಡಿ ತಂಟೆ: ತಕ್ಷಣ ಸಭೆಗೆ ಎಚ್ಕೆ ಆಗ್ರಹ

Last Updated 21 ಡಿಸೆಂಬರ್ 2019, 20:03 IST
ಅಕ್ಷರ ಗಾತ್ರ

ಬೆಂಗಳೂರು: ಮಹಾರಾಷ್ಟ್ರ ಸರ್ಕಾರ ಮತ್ತೆ ಗಡಿ ತಂಟೆ ಆರಂಭಿಸಿದ್ದು, ರಾಜ್ಯ ಸರ್ಕಾರ ತಕ್ಷಣ ಈ ಹಿಂದೆ ಗಡಿ ವಿವಾದದ ಕುರಿತು ಸೇವೆ ಸಲ್ಲಿಸಿದವರ ಸಭೆ ಕರೆಯಬೇಕು ಎಂದು ಶಾಸಕ ಎಚ್‌.ಕೆ.ಪಾಟೀಲ ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ನಡೆದ ಉಪಚುನಾವಣೆ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರವು 2004ರಲ್ಲಿ ತಾನು ದಾಖಲಿಸಿದ ಮೂಲ ದಾವೆಯನ್ನು ಮುಂದುವರಿಸಿಕೊಂಡು ಹೋಗಲು ಇಬ್ಬರು ಸಚಿವರ ಸಮಿತಿ ರಚಿಸಿದೆ. ಇದರ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ಹೇಳಿದ್ದಾರೆ.

ಗಡಿ ವಿಚಾರದಲ್ಲಿ ಸದ್ಯ ರಾಜ್ಯಕ್ಕೆ ಎಲ್ಲ ಕಾನೂನು ಬಲವೂ ಇದೆ. ಸುಪ್ರೀಂ ಕೋರ್ಟ್‌ ಸಹ ರಾಜ್ಯದ ವಾದವನ್ನು ಪುರಸ್ಕರಿಸಿದೆ. ಆದರೂ ಮಹಾರಾಷ್ಟ್ರದ ನೂತನ ಸರ್ಕಾರದ ಗಡಿ ತಂಟೆಯನ್ನು ಗಮನಿಸಿ, ಅಗತ್ಯವಾದ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT