ಅತೃಪ್ತರ ಪರ ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಇಂದು ಸುಪ್ರೀಂಕೋರ್ಟ್ಗೆ ಬರಲಿಲ್ಲ. ಕಲಾಪ ಆರಂಭವಾಗುತ್ತಿದ್ದಂತೆ ‘ರೋಹಟಗಿ ಎಲ್ಲಿ? ಸಿಂಘ್ವಿ ಎಲ್ಲಿ? ನಾವು ಅವರ ಉಪಸ್ಥಿತಿಯಲ್ಲಿ ತೀರ್ಪು ಪ್ರಕಟಿಸುತ್ತೇವೆ’ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದರು.