<p><strong>ಬೆಂಗಳೂರು:</strong> ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಲು ದೋಸ್ತಿ ಸರ್ಕಾರಕ್ಕೆ ಇನ್ನು ಎರಡು ದಿನ ಮಾತ್ರ ಉಳಿದಿದ್ದು, ಅತೃಪ್ತ ಶಾಸಕರನ್ನು ಸಂಪರ್ಕಿಸಲು ಪ್ರಯತ್ನ ಮುಂದುವರಿದಿದೆ.</p>.<p>ಮುಂಬೈಯ ಅಜ್ಞಾತ ಸ್ಥಳದಲ್ಲಿರುವ ಶಾಸಕರನ್ನು ಹೇಗಾದರೂ ಮಾಡಿ ಸಂಪರ್ಕಿಸಬೇಕು. ವಿಶ್ವಾಸ ಮತದ ಮತದಾನದ ವೇಳೆ ಭಾಗವಹಿಸಬೇಕು ಎಂದು ಅವರ ಮನವೊಲಿಸುವ ಪ್ರಯತ್ನವನ್ನು ಜೆಡಿಎಸ್ ಗಿಂತಲೂ ಹೆಚ್ಚಾಗಿ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ.</p>.<p>ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಸಹಾಯ ಪಡೆದು ಮೊದಲಾಗಿ ಶಾಸಕರು ಇರುವ ಸ್ಥಳ ಪತ್ತೆ ಹಚ್ಚಬೇಕು. ಬಳಿಕ ಅವರ ಮನವೊಲಿಸಬೇಕು ಎಂಬ ಚಿಂತನೆಯಲ್ಲಿ ನಾಯಕರಿದ್ದಾರೆ.</p>.<p>ಈ ಮಧ್ಯೆ ಕಾಂಗ್ರೆಸ್ ಶಾಸಕರು ನೆಲೆಸಿರುವ ಯಶವಂತಪುರದ ತಾಜ್ ವಿವಾಂತ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಣತಂತ್ರ ರೂಪಿಸಲು ಸಿದ್ಧತೆ ನಡೆದಿದೆ.</p>.<p>ಮತ್ತೊಂದೆಡೆಯಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮನೆಯಲ್ಲಿ ಸಹ ಮುಂದಿನ ನಡೆಗಳ ಕುರಿತಂತೆ ಗಹನವಾದ ಸಮಾಲೋಚನೆ ನಡೆಯುತ್ತಿದೆ.</p>.<p>ರಾಜ್ಯಪಾಲರ ಸಲಹೆಯನ್ನು ಧಿಕ್ಕರಿಸಿರುವ ಹಿನ್ನೆಲೆಯಲ್ಲಿ ಗೃಹ ಸಚಿವಾಲಯಕ್ಕೆ ವಿವರವಾದ ವರದಿ ಸಲ್ಲಿಸಲಾಗಿದೆ. ಇದರ ಪರಿಣಾಮಗಳ ಬಗ್ಗೆ ಸಹ ಎರಡೂ ಪಕ್ಷಗಳಲ್ಲಿ ಸಮಾಲೋಚನೆ ನಡೆಯುತ್ತಿದೆ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಲು ದೋಸ್ತಿ ಸರ್ಕಾರಕ್ಕೆ ಇನ್ನು ಎರಡು ದಿನ ಮಾತ್ರ ಉಳಿದಿದ್ದು, ಅತೃಪ್ತ ಶಾಸಕರನ್ನು ಸಂಪರ್ಕಿಸಲು ಪ್ರಯತ್ನ ಮುಂದುವರಿದಿದೆ.</p>.<p>ಮುಂಬೈಯ ಅಜ್ಞಾತ ಸ್ಥಳದಲ್ಲಿರುವ ಶಾಸಕರನ್ನು ಹೇಗಾದರೂ ಮಾಡಿ ಸಂಪರ್ಕಿಸಬೇಕು. ವಿಶ್ವಾಸ ಮತದ ಮತದಾನದ ವೇಳೆ ಭಾಗವಹಿಸಬೇಕು ಎಂದು ಅವರ ಮನವೊಲಿಸುವ ಪ್ರಯತ್ನವನ್ನು ಜೆಡಿಎಸ್ ಗಿಂತಲೂ ಹೆಚ್ಚಾಗಿ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ.</p>.<p>ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಸಹಾಯ ಪಡೆದು ಮೊದಲಾಗಿ ಶಾಸಕರು ಇರುವ ಸ್ಥಳ ಪತ್ತೆ ಹಚ್ಚಬೇಕು. ಬಳಿಕ ಅವರ ಮನವೊಲಿಸಬೇಕು ಎಂಬ ಚಿಂತನೆಯಲ್ಲಿ ನಾಯಕರಿದ್ದಾರೆ.</p>.<p>ಈ ಮಧ್ಯೆ ಕಾಂಗ್ರೆಸ್ ಶಾಸಕರು ನೆಲೆಸಿರುವ ಯಶವಂತಪುರದ ತಾಜ್ ವಿವಾಂತ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಣತಂತ್ರ ರೂಪಿಸಲು ಸಿದ್ಧತೆ ನಡೆದಿದೆ.</p>.<p>ಮತ್ತೊಂದೆಡೆಯಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮನೆಯಲ್ಲಿ ಸಹ ಮುಂದಿನ ನಡೆಗಳ ಕುರಿತಂತೆ ಗಹನವಾದ ಸಮಾಲೋಚನೆ ನಡೆಯುತ್ತಿದೆ.</p>.<p>ರಾಜ್ಯಪಾಲರ ಸಲಹೆಯನ್ನು ಧಿಕ್ಕರಿಸಿರುವ ಹಿನ್ನೆಲೆಯಲ್ಲಿ ಗೃಹ ಸಚಿವಾಲಯಕ್ಕೆ ವಿವರವಾದ ವರದಿ ಸಲ್ಲಿಸಲಾಗಿದೆ. ಇದರ ಪರಿಣಾಮಗಳ ಬಗ್ಗೆ ಸಹ ಎರಡೂ ಪಕ್ಷಗಳಲ್ಲಿ ಸಮಾಲೋಚನೆ ನಡೆಯುತ್ತಿದೆ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>