ಆಲಮಟ್ಟಿಯಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವಧಿಯಲ್ಲಿ 14 ಲಕ್ಷ ಆಶ್ರಯ ಮನೆಗಳನ್ನು ನಿರ್ಮಿಸಲಾಗಿದೆ. ಆದರೆ, ಇವೆಲ್ಲ ಕೇವಲ ಕಡತದಲ್ಲಿವೆ. ಅರ್ಹ ಫಲಾನುಭವಿಗಳಿಗೆ ಮನೆಗಳು ಸಿಕ್ಕಿಲ್ಲ. ಎಲ್ಲವೂ ತಮಗೆ ಬೇಕಾದವರಿಗೆ, ಬೆಂಬಲಿಗರಿಗೆ, ಹಣ ಕೊಟ್ಟವರಿಗೆ ಕೊಡಲಾಗಿದೆ ಎಂಬ ದೂರುಗಳು ಬಂದಿವೆ. ಹೀಗಾಗಿ, ತನಿಖೆಗೆ ಆದೇಶಿಸಲಾಗಿದ್ದು, ನಾಲ್ಕು ದಿನಗಳಲ್ಲಿ ತನಿಖೆ ಆರಂಭವಾಗಲಿದೆ’ ಎಂದರು.