ಕೊರೊನಾ ಕುರಿತು ಪ್ರತಿಕ್ರಿಯಿಸಿದ ಸುಧಾಕರ್, ರಾಜ್ಯದಲ್ಲಿ ನಾಲ್ಕು ತಿಂಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಪ್ರಕರಣ ದಾಖಲಾಗಿವೆ. ಇದರಲ್ಲಿ ಮಂಡ್ಯ, ರಾಯಚೂರು, ಯಾದಗಿರಿ, ಗದಗ ಸೇರಿದಂತೆ ಎಲ್ಲಾ ಪ್ರಕರಣಗಳು ಮಹಾರಾಷ್ಟ್ರದಿಂದ ಬಂದವರು. ಒಟ್ಟು 598 ಗುಣಮುಖರಾಗಿದ್ದು, 42 ಜನ ನಿಧನ ಹೊಂದಿದ್ದಾರೆ. ಕೆಲವು ರಾಜ್ಯಗಳಲ್ಲಿ ಹೃದಯಾಘಾತದಿಂದ ಮೃತಪಟ್ಟರೆ ಕೊರೊನಾ ಪಟ್ಟಿಯಲ್ಲಿ ತೋರಿಸುತ್ತಿಲ್ಲ. ನಾವು ಎಲ್ಲವನ್ನೂ ಸರಿಯಾದ ಅಂಕಿ - ಅಂಶಗಳನ್ನು ನೀಡುವುದರಿಂದ ಸಾವಿನ ಸಂಖ್ಯೆ ಹೆಚ್ಚು ಕಾಣಿಸುತ್ತದೆ ಎಂದು ಮಾಹಿತಿ ನೀಡಿದರು.