ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ಸವದಿಯವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಉಪಮುಖ್ಯಮಂತ್ರಿಯಂತಹ ದೊಡ್ಡ ಜವಾಬ್ದಾರಿ ನೀಡಿದ್ದರಿಂದ ಟಿಕೆಟ್ ಖಚಿತ ಎಂದೇ ಭಾವಿಸಲಾಗಿತ್ತು. ಆ ಸಾಧ್ಯತೆ ಈಗ ದೂರವಾಗಿದೆ. ವಿಧಾನಪರಿಷತ್ತಿಗೆ ನೇಮಕ ಮಾಡುವ ಸಾಧ್ಯತೆ ಇದೆ. ವಿಧಾನಪರಿಷತ್ನಲ್ಲಿ 2022 ರವರೆಗೆ ಯಾವುದೇ ಸದಸ್ಯರ ಸ್ಥಾನಗಳು ತೆರವಾಗುವುದಿಲ್ಲ. ಹೀಗಾಗಿ ಪರಿಷತ್ನ ನಿಷ್ಠಾವಂತ ಸದಸ್ಯರಿಂದ ರಾಜೀನಾಮೆ ಕೊಡಿಸಿ, ಆ ಸ್ಥಾನಕ್ಕೆ ಸವದಿಯವರನ್ನು ನೇಮಕ ಮಾಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.