<p><strong>ಕಲಬುರ್ಗಿ</strong>: ರಾಜ್ಯದಲ್ಲಿರುವ ಅನಗತ್ಯ ಇಲಾಖೆಗಳನ್ನು ರದ್ದು ಮಾಡುವ ಅಥವಾ ಪ್ರಮುಖ ಇಲಾಖೆಗಳಲ್ಲಿ ವಿಲೀನ ಮಾಡುವ ಮೂಲಕ ಅಲ್ಲಿರುವ ಸಿಬ್ಬಂದಿಯನ್ನು ಅಗತ್ಯವಿರುವಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿ ಇದ್ದಾರೆ. ಅವರಿಗೆ ಹೆಚ್ಚು ಕೆಲಸ ಇಲ್ಲ. ಅವರನ್ನು ಅಗತ್ಯವಿರುವ ಕಂದಾಯ ಇಲಾಖೆಯ ಇತರ ಶಾಖೆಗಳಿಗೆ ನಿಯೋಜಿಸಲಾಗುವುದು’ ಎಂದರು.</p>.<p><strong>ಗ್ರಾಮವಾಸ್ತವ್ಯ, ಅಂಗನವಾಡಿ ಊಟ: </strong>‘ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರರು ಪ್ರತಿ ತಿಂಗಳು ಗ್ರಾಮವೊಂದಕ್ಕೆ ಭೇಟಿ ನೀಡಿ ಇಡೀ ದಿನ ಅಲ್ಲೇ ಇರಬೇಕು. ಅಲ್ಲಿನ ಅಂಗನವಾಡಿಯಲ್ಲಿಯೇ ಊಟ ಮಾಡಬೇಕು ಎಂದು ಸೂಚಿಸಲಾಗಿದೆ. ಅಲ್ಲಿನ ಜನರ ಸಮಸ್ಯೆ ಅರಿಯಲು ಇದು ಸಹಕಾರಿಯಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ರಾಜ್ಯದಲ್ಲಿರುವ ಅನಗತ್ಯ ಇಲಾಖೆಗಳನ್ನು ರದ್ದು ಮಾಡುವ ಅಥವಾ ಪ್ರಮುಖ ಇಲಾಖೆಗಳಲ್ಲಿ ವಿಲೀನ ಮಾಡುವ ಮೂಲಕ ಅಲ್ಲಿರುವ ಸಿಬ್ಬಂದಿಯನ್ನು ಅಗತ್ಯವಿರುವಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿ ಇದ್ದಾರೆ. ಅವರಿಗೆ ಹೆಚ್ಚು ಕೆಲಸ ಇಲ್ಲ. ಅವರನ್ನು ಅಗತ್ಯವಿರುವ ಕಂದಾಯ ಇಲಾಖೆಯ ಇತರ ಶಾಖೆಗಳಿಗೆ ನಿಯೋಜಿಸಲಾಗುವುದು’ ಎಂದರು.</p>.<p><strong>ಗ್ರಾಮವಾಸ್ತವ್ಯ, ಅಂಗನವಾಡಿ ಊಟ: </strong>‘ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರರು ಪ್ರತಿ ತಿಂಗಳು ಗ್ರಾಮವೊಂದಕ್ಕೆ ಭೇಟಿ ನೀಡಿ ಇಡೀ ದಿನ ಅಲ್ಲೇ ಇರಬೇಕು. ಅಲ್ಲಿನ ಅಂಗನವಾಡಿಯಲ್ಲಿಯೇ ಊಟ ಮಾಡಬೇಕು ಎಂದು ಸೂಚಿಸಲಾಗಿದೆ. ಅಲ್ಲಿನ ಜನರ ಸಮಸ್ಯೆ ಅರಿಯಲು ಇದು ಸಹಕಾರಿಯಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>