ಪಟ್ಟಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಮ್ಮಿಶ್ರ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ನಮ್ಮ ಕ್ಷೇತ್ರಕ್ಕೆ ಯಾವುದೇ ರೀತಿಯ ಅನುದಾನವನ್ನೂ ನೀಡಲಿಲ್ಲ. ಮುಂದೆಯೂ ಹೀಗೆಯೇ ಆಗಬಹುದು ಎಂದೆಣಿಸಿ ರಾಜೀನಾಮೆ ನೀಡಿದೆವು. ನ್ಯಾಯಾಲಯದ ತೀರ್ಪು ಬಂದ ನಂತರವೇ ಯಾವ ಪಕ್ಷಕ್ಕೆ ಹೋಗಬೇಕು ಎನ್ನುವುದನ್ನು ತೀರ್ಮಾನಿಸಲಾಗುತ್ತದೆ’ ಎಂದು ಹೇಳಿದರು.