‘ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ’ ಎಂಬ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ತಮ್ಮ ಪಕ್ಷದೊಳಗಿನ ಜಗಳ ಮುಚ್ಚಿಕೊಳ್ಳಲು ಅವರು ಸುಳ್ಳು ಹೇಳುತ್ತಿದ್ದಾರೆ. ಜಾರಕಿಹೊಳಿ ಪಕ್ಷ ತ್ಯಜಿಸಿದಾಗ ಮಹೇಶ್ ಕುಮಠಳ್ಳಿ ಬಿಟ್ಟರೆ ಬೇರೆ ಶಾಸಕರು ಅವರ ಜೊತೆ ಇರಲಿಲ್ಲ. ಜೆಡಿಎಸ್ನ ಮೂವರು, ಕಾಂಗ್ರೆಸ್ನ 14 ಮಂದಿ ಅಧಿಕಾರ ಮತ್ತು ಹಣಕ್ಕಾಗಿ ಪಕ್ಷಾಂತರ ಮಾಡಿದರು’ ಎಂದರು.