ಚಿಕ್ಕಬಳ್ಳಾಪುರ: ‘ಪಕ್ಷಕ್ಕಾಗಿ, ನಮ್ಮನ್ನು ನಂಬಿರುವ ನಾಯಕರಿಗಾಗಿ ನಿಮ್ಮ ನಾಯಕತ್ವವನ್ನು ಆರು ವರ್ಷಗಳ ಕಾಲ ಹೆಗಲ ಮೇಲೆ ಇಟ್ಟುಕೊಂಡು ರಕ್ಷಣೆ ಮಾಡಿ, ನಿಮ್ಮ ವಿರುದ್ಧ ಯಾರೊಬ್ಬರೂ ಒಂದೇ ಒಂದು ಮಾತನಾಡದಂತೆ ಹೋರಾಟ ಮಾಡಿದ ನಮ್ಮನ್ನೇ ನೀವು ಅನರ್ಹಗೊಳಿಸಿದಿರಲ್ಲ, ನಿಮಗೆ ಹೃದಯ, ಮನಸು ಇದೆಯಾ?’ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು.