<p><strong>ಬೆಂಗಳೂರು</strong>: ‘ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) 1998ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಮತ್ತು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮುಂದೆ ಇರುವ ಎಲ್ಲ ಅರ್ಜಿಗಳನ್ನು ಒಂದೇ ಪೀಠಕ್ಕೆ ವರ್ಗಾವಣೆ ಮಾಡು<br />ವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ’ ಎಂದು ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.</p>.<p>‘2016ರ ಜೂನ್ 21ರಂದು ಹೈಕೋರ್ಟ್ ನೀಡಿದ್ದ ನಿರ್ದೇಶನ ಪಾಲನೆಗೆ ಸರ್ಕಾರ ಮೀನಮೇಷ ಎಣಿಸುತ್ತಿದೆ’ ಎಂದು ದೂರಿ ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಗಳನ್ನು ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ವಿಶೇಷ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ, ‘ಹೈಕೋರ್ಟ್ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವ ದಿಸೆಯಲ್ಲಿ ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತಿದೆ. ಆದರೆ, ಕೆಲವರು, ಸಿಎಟಿ ಹಾಗೂ ಕೆಎಟಿಯಿಂದ ಮಧ್ಯಂತರ ಆದೇಶ<br />ಗಳನ್ನು ಪಡೆದಿದ್ದಾರೆ. ಹೀಗಾಗಿ ಪೂರ್ಣ ಪ್ರಮಾಣದ ಅನುಷ್ಠಾನಕ್ಕೆ ಅಡಚಣೆಯಾಗುತ್ತಿದೆ’ ಎಂದು ವಿವರಿಸಿದರು.</p>.<p>ಇದಕ್ಕೆ ನ್ಯಾಯಪೀಠ, ‘ಈ ಕುರಿತ ಎಲ್ಲ ಅರ್ಜಿಗಳನ್ನೂ ಒಂದೇ ಪೀಠಕ್ಕೆ ವರ್ಗಾಯಿಸುವುದು ಉಚಿತವಲ್ಲವೇ’ ಎಂದು ನಾವದಗಿ ಅವರನ್ನು ಪ್ರಶ್ನಿಸಿತು.</p>.<p>ಇದಕ್ಕೆ ಸಹಮತ ವ್ಯಕ್ತಪಡಿಸಿದ ನಾವದಗಿ, ‘ಈ ದಿಸೆಯಲ್ಲಿ ಮುಂದುವರಿಯಲು ಸರ್ಕಾರಕ್ಕೆ ಒಂದಷ್ಟು ಸಮಯಾವಕಾಶ ನೀಡಬೇಕು’ ಎಂದು ಕೋರಿದರು.</p>.<p>ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು 2020ರ ಫೆಬ್ರುವರಿ 7ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) 1998ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಮತ್ತು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮುಂದೆ ಇರುವ ಎಲ್ಲ ಅರ್ಜಿಗಳನ್ನು ಒಂದೇ ಪೀಠಕ್ಕೆ ವರ್ಗಾವಣೆ ಮಾಡು<br />ವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ’ ಎಂದು ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.</p>.<p>‘2016ರ ಜೂನ್ 21ರಂದು ಹೈಕೋರ್ಟ್ ನೀಡಿದ್ದ ನಿರ್ದೇಶನ ಪಾಲನೆಗೆ ಸರ್ಕಾರ ಮೀನಮೇಷ ಎಣಿಸುತ್ತಿದೆ’ ಎಂದು ದೂರಿ ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಗಳನ್ನು ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ವಿಶೇಷ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ, ‘ಹೈಕೋರ್ಟ್ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವ ದಿಸೆಯಲ್ಲಿ ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತಿದೆ. ಆದರೆ, ಕೆಲವರು, ಸಿಎಟಿ ಹಾಗೂ ಕೆಎಟಿಯಿಂದ ಮಧ್ಯಂತರ ಆದೇಶ<br />ಗಳನ್ನು ಪಡೆದಿದ್ದಾರೆ. ಹೀಗಾಗಿ ಪೂರ್ಣ ಪ್ರಮಾಣದ ಅನುಷ್ಠಾನಕ್ಕೆ ಅಡಚಣೆಯಾಗುತ್ತಿದೆ’ ಎಂದು ವಿವರಿಸಿದರು.</p>.<p>ಇದಕ್ಕೆ ನ್ಯಾಯಪೀಠ, ‘ಈ ಕುರಿತ ಎಲ್ಲ ಅರ್ಜಿಗಳನ್ನೂ ಒಂದೇ ಪೀಠಕ್ಕೆ ವರ್ಗಾಯಿಸುವುದು ಉಚಿತವಲ್ಲವೇ’ ಎಂದು ನಾವದಗಿ ಅವರನ್ನು ಪ್ರಶ್ನಿಸಿತು.</p>.<p>ಇದಕ್ಕೆ ಸಹಮತ ವ್ಯಕ್ತಪಡಿಸಿದ ನಾವದಗಿ, ‘ಈ ದಿಸೆಯಲ್ಲಿ ಮುಂದುವರಿಯಲು ಸರ್ಕಾರಕ್ಕೆ ಒಂದಷ್ಟು ಸಮಯಾವಕಾಶ ನೀಡಬೇಕು’ ಎಂದು ಕೋರಿದರು.</p>.<p>ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು 2020ರ ಫೆಬ್ರುವರಿ 7ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>