ಶಾಸಕರ ಜತೆಗೆ ಅವರ ಕ್ಷೇತ್ರಗಳಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಮಳೆ ಮತ್ತು ಪ್ರವಾಹ ಪೀಡಿತ ಪ್ರದೇಶಗಳ ಶಾಸಕರು ಹೆಚ್ಚಿನ ಸಮಸ್ಯೆಗಳನ್ನು ಹೇಳಿಕೊಂಡರು. ಪ್ರವಾಹ ಪೀಡಿತ ಪ್ರದೇಶದಲ್ಲಿ ಮನೆಗಳನ್ನು ಕಟ್ಟಿಸಿಕೊಡುವುದು ಸರ್ಕಾರದ ಆದ್ಯತೆಯಾಗಿದೆ. ₹25 ಕೋಟಿ ಅನುದಾನದಲ್ಲಿ ನೀರಾವರಿ ಯೋಜನೆಗಳು, ಕೆರೆ ತುಂಬಿಸುವ ಯೋಜನೆ, ಶಾಲಾ ಕೊಠಡಿಗಳ ರಿಪೇರಿ ಮುಂತಾದ ಕಾರ್ಯ ಕೈಗೆತ್ತಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿರುವುದಾಗಿ ಹೇಳಿದರು.