<p><strong>ಬೆಂಗಳೂರು</strong>: ‘ಕನ್ನಡ ಶಾಸ್ತ್ರೀಯ ಭಾಷೆಯ ಸ್ಥಾನಮಾನದಡಿ ಕೇಂದ್ರದ ಸೌಲಭ್ಯಗಳನ್ನು ಪಡೆದು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಲು ರಾಜ್ಯ ಸರ್ಕಾರದ ನಿಷ್ಕ್ರಿಯತೆಯೇ ಮುಖ್ಯ ಕಾರಣ’.</p>.<p>ಹೀಗೆಂದು ಭಾರತೀಯ ಮಹಾಲೇಖಪಾಲರ ವರದಿ (ಸಿಎಜಿ) ಸ್ಪಷ್ಟ ಮಾತುಗಳಲ್ಲಿ ಚಾಟಿ ಬೀಸಿರುವುದರಿಂದ ರಾಜ್ಯ ಸರ್ಕಾರ ಈಗಎಚ್ಚೆತ್ತುಕೊಂಡಿದೆ.</p>.<p>2008ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡದಿದ್ದರೆ, ಉಪವಾಸ ಸತ್ಯಾಗ್ರಹ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅದರ ಬೆನ್ನಲ್ಲೇ ಕೇಂದ್ರ ಸರ್ಕಾರ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡಿತು. ಇದರ ಹಿಂದೆ ಸಾಹಿತಿಗಳ ದೊಡ್ಡ ಹೋರಾಟವೇ ನಡೆದಿತ್ತು.</p>.<p>ಶಾಸ್ತ್ರೀಯ ಸ್ಥಾನಮಾನ ಪಡೆದ ಬಳಿಕ ಯಾವುದೇ ಸರ್ಕಾರ ಹೆಚ್ಚಿನ ಆಸಕ್ತಿ ತೋರಲಿಲ್ಲ. ಕೇಂದ್ರ ಬಿಡುಗಡೆ ಮಾಡಿದ ಹಣವನ್ನೂ ಸರಿಯಾಗಿ ಬಳಸಿಕೊಳ್ಳಲಿಲ್ಲ.2011–12ರಿಂದ 2016–17ರ ಅವಧಿಯಲ್ಲಿ ಕೇಂದ್ರ ಸರ್ಕಾರ ₹8.91 ಕೋಟಿ ಹಣ ಬಿಡುಗಡೆ ಮಾಡಿತ್ತು. ಆದರೆ ಖರ್ಚು ಮಾಡಿದ್ದು ಕೇವಲ ₹ 2.78 ಕೋಟಿ ಎಂದು ವರದಿ ಹೇಳಿದೆ.</p>.<p>ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಈ ಕುರಿತು ತಜ್ಞರ ಸಭೆಯೊಂದನ್ನು ನಡೆಸಿ, ಶಾಸ್ತ್ರೀಯ ಭಾಷೆ ಸ್ಥಾನಮಾನದಡಿ ಆಗಬೇಕಿರುವ ಕೆಲಸಗಳಿಗೆ ಚುರುಕು ನೀಡುವುದಾಗಿ ವಾಗ್ದಾನ ಮಾಡಿದ್ದಾರೆ.</p>.<p>ನವೆಂಬರ್ 1ರ ಒಳಗೆ ಪ್ರತ್ಯೇಕ ಆಡಳಿತ ಮಂಡಳಿ, ಹಣಕಾಸು ಸಮಿತಿ ಮತ್ತು ಪಂಡಿತ ಮಂಡಳಿ ರಚನೆ,ಜಮೀನು ಗುರುತಿಸುವಿಕೆಯಂತಹ ಕ್ರಮಗಳನ್ನು ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದರೂ ಈ ಕಾರ್ಯದಲ್ಲಿ ಹೆಚ್ಚಿನ ಪ್ರಗತಿ ಆಗಿಲ್ಲ.</p>.<p>‘2008ರಿಂದ ಈಚೆಗೆ ಶಾಸ್ತ್ರೀಯ ಸ್ಥಾನಮಾನ ಪಡೆದ ನಂತರ ಕನ್ನಡದ ಹಲವು ಯೋಜನೆಗಳಿಗಾಗಿ ಕೇಂದ್ರ ಸರ್ಕಾರ ₹ 10 ಕೋಟಿ ಅನುದಾನವನ್ನು ಮಾತ್ರ ಬಿಡುಗಡೆ ಮಾಡಿದೆ. ಆದರೆ ಸೂಕ್ತ ಮೂಲಸೌಲಭ್ಯ ಇಲ್ಲದ ಕಾರಣ ವಾರ್ಷಿಕ ₹ 84 ಲಕ್ಷಕ್ಕಿಂತ ಹೆಚ್ಚು ಖರ್ಚು ಮಾಡುವುದು ರಾಜ್ಯಕ್ಕೆ ಸಾಧ್ಯವಾಗಿಲ್ಲ. ಉಳಿದ ಹಣ ಕೇಂದ್ರಕ್ಕೆ ವಾಪಸ್ ಹೋಗುವಂತಾಗಿದೆ’ ಎಂಬುದನ್ನು ರವಿ ಒಪ್ಪಿಕೊಂಡಿದ್ದಾರೆ.</p>.<p>‘ಶಾಸ್ತ್ರೀಯ ಕನ್ನಡ ಅಧ್ಯಯನದ ಉತ್ಕೃಷ್ಟತಾ ಕೇಂದ್ರ’ ಎಲ್ಲಿ ಇರಬೇಕು ಎಂಬ ತಿಕ್ಕಾಟಕ್ಕೆ ಕೊನೆಗೂ ತೆರೆ ಬೀಳುವ ಹಂತವನ್ನು ತಲುಪಿದೆ. ಈ ಕೇಂದ್ರಕ್ಕೆ ಅಗತ್ಯವಾಗಿ 5 ಎಕರೆ ಜಮೀನು ಬೇಕಿದ್ದು, ಮೈಸೂರು ವಿಶ್ವವಿದ್ಯಾಲಯವು ಜಮೀನು ನೀಡುವುದಾಗಿ ಹೇಳಿದೆ. ಬೆಂಗಳೂರು ವಿಶ್ವವಿದ್ಯಾಲಯ 3 ಎಕರೆ ಜಮೀನು ನೀಡಲು ಒಪ್ಪಿದೆ. ತಜ್ಞರ ಅಭಿಮತದಂತೆ ಮೈಸೂರಿನಲ್ಲೇ ಸ್ಥಾಪಿಸಲು ತೀರ್ಮಾನಿಸಿರುವುದಾಗಿಯೂ ಸಚಿವ ರವಿ ಹೇಳಿದ್ದಾರೆ.</p>.<p>ತಮಿಳುನಾಡಿನಲ್ಲಿ ತಮಿಳು ಶ್ರೇಷ್ಠತಾ ಕೇಂದ್ರ ಸ್ವಾಯತ್ತವಾಗಿರುವಂತೆ ಇಲ್ಲೂ ಸ್ವಾಯತ್ತ ಕೇಂದ್ರದ ಸ್ಥಾಪನೆ ಆಗಬೇಕು. ಈಗ ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಿಬ್ಬಂದಿ ಮತ್ತು ಮೂಲ ಸೌಕರ್ಯವನ್ನೂ ಕಲ್ಪಿಸಬೇಕಿದೆ.</p>.<p>ಕೇಂದ್ರವು 2004ರಲ್ಲಿ ತಮಿಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡಿದ್ದರೆ, 2005ರಲ್ಲಿ ಸಂಸ್ಕೃತ, 2008ರಲ್ಲಿ ಕನ್ನಡ ಮತ್ತು ತೆಲುಗು, 2013ರಲ್ಲಿ ಮಲಯಾಳ, 2014ರಲ್ಲಿ ಒಡಿಯಾ ಭಾಷೆಗಳಿಗೆ ಈ ಸ್ಥಾನಮಾನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕನ್ನಡ ಶಾಸ್ತ್ರೀಯ ಭಾಷೆಯ ಸ್ಥಾನಮಾನದಡಿ ಕೇಂದ್ರದ ಸೌಲಭ್ಯಗಳನ್ನು ಪಡೆದು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಲು ರಾಜ್ಯ ಸರ್ಕಾರದ ನಿಷ್ಕ್ರಿಯತೆಯೇ ಮುಖ್ಯ ಕಾರಣ’.</p>.<p>ಹೀಗೆಂದು ಭಾರತೀಯ ಮಹಾಲೇಖಪಾಲರ ವರದಿ (ಸಿಎಜಿ) ಸ್ಪಷ್ಟ ಮಾತುಗಳಲ್ಲಿ ಚಾಟಿ ಬೀಸಿರುವುದರಿಂದ ರಾಜ್ಯ ಸರ್ಕಾರ ಈಗಎಚ್ಚೆತ್ತುಕೊಂಡಿದೆ.</p>.<p>2008ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡದಿದ್ದರೆ, ಉಪವಾಸ ಸತ್ಯಾಗ್ರಹ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅದರ ಬೆನ್ನಲ್ಲೇ ಕೇಂದ್ರ ಸರ್ಕಾರ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡಿತು. ಇದರ ಹಿಂದೆ ಸಾಹಿತಿಗಳ ದೊಡ್ಡ ಹೋರಾಟವೇ ನಡೆದಿತ್ತು.</p>.<p>ಶಾಸ್ತ್ರೀಯ ಸ್ಥಾನಮಾನ ಪಡೆದ ಬಳಿಕ ಯಾವುದೇ ಸರ್ಕಾರ ಹೆಚ್ಚಿನ ಆಸಕ್ತಿ ತೋರಲಿಲ್ಲ. ಕೇಂದ್ರ ಬಿಡುಗಡೆ ಮಾಡಿದ ಹಣವನ್ನೂ ಸರಿಯಾಗಿ ಬಳಸಿಕೊಳ್ಳಲಿಲ್ಲ.2011–12ರಿಂದ 2016–17ರ ಅವಧಿಯಲ್ಲಿ ಕೇಂದ್ರ ಸರ್ಕಾರ ₹8.91 ಕೋಟಿ ಹಣ ಬಿಡುಗಡೆ ಮಾಡಿತ್ತು. ಆದರೆ ಖರ್ಚು ಮಾಡಿದ್ದು ಕೇವಲ ₹ 2.78 ಕೋಟಿ ಎಂದು ವರದಿ ಹೇಳಿದೆ.</p>.<p>ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಈ ಕುರಿತು ತಜ್ಞರ ಸಭೆಯೊಂದನ್ನು ನಡೆಸಿ, ಶಾಸ್ತ್ರೀಯ ಭಾಷೆ ಸ್ಥಾನಮಾನದಡಿ ಆಗಬೇಕಿರುವ ಕೆಲಸಗಳಿಗೆ ಚುರುಕು ನೀಡುವುದಾಗಿ ವಾಗ್ದಾನ ಮಾಡಿದ್ದಾರೆ.</p>.<p>ನವೆಂಬರ್ 1ರ ಒಳಗೆ ಪ್ರತ್ಯೇಕ ಆಡಳಿತ ಮಂಡಳಿ, ಹಣಕಾಸು ಸಮಿತಿ ಮತ್ತು ಪಂಡಿತ ಮಂಡಳಿ ರಚನೆ,ಜಮೀನು ಗುರುತಿಸುವಿಕೆಯಂತಹ ಕ್ರಮಗಳನ್ನು ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದರೂ ಈ ಕಾರ್ಯದಲ್ಲಿ ಹೆಚ್ಚಿನ ಪ್ರಗತಿ ಆಗಿಲ್ಲ.</p>.<p>‘2008ರಿಂದ ಈಚೆಗೆ ಶಾಸ್ತ್ರೀಯ ಸ್ಥಾನಮಾನ ಪಡೆದ ನಂತರ ಕನ್ನಡದ ಹಲವು ಯೋಜನೆಗಳಿಗಾಗಿ ಕೇಂದ್ರ ಸರ್ಕಾರ ₹ 10 ಕೋಟಿ ಅನುದಾನವನ್ನು ಮಾತ್ರ ಬಿಡುಗಡೆ ಮಾಡಿದೆ. ಆದರೆ ಸೂಕ್ತ ಮೂಲಸೌಲಭ್ಯ ಇಲ್ಲದ ಕಾರಣ ವಾರ್ಷಿಕ ₹ 84 ಲಕ್ಷಕ್ಕಿಂತ ಹೆಚ್ಚು ಖರ್ಚು ಮಾಡುವುದು ರಾಜ್ಯಕ್ಕೆ ಸಾಧ್ಯವಾಗಿಲ್ಲ. ಉಳಿದ ಹಣ ಕೇಂದ್ರಕ್ಕೆ ವಾಪಸ್ ಹೋಗುವಂತಾಗಿದೆ’ ಎಂಬುದನ್ನು ರವಿ ಒಪ್ಪಿಕೊಂಡಿದ್ದಾರೆ.</p>.<p>‘ಶಾಸ್ತ್ರೀಯ ಕನ್ನಡ ಅಧ್ಯಯನದ ಉತ್ಕೃಷ್ಟತಾ ಕೇಂದ್ರ’ ಎಲ್ಲಿ ಇರಬೇಕು ಎಂಬ ತಿಕ್ಕಾಟಕ್ಕೆ ಕೊನೆಗೂ ತೆರೆ ಬೀಳುವ ಹಂತವನ್ನು ತಲುಪಿದೆ. ಈ ಕೇಂದ್ರಕ್ಕೆ ಅಗತ್ಯವಾಗಿ 5 ಎಕರೆ ಜಮೀನು ಬೇಕಿದ್ದು, ಮೈಸೂರು ವಿಶ್ವವಿದ್ಯಾಲಯವು ಜಮೀನು ನೀಡುವುದಾಗಿ ಹೇಳಿದೆ. ಬೆಂಗಳೂರು ವಿಶ್ವವಿದ್ಯಾಲಯ 3 ಎಕರೆ ಜಮೀನು ನೀಡಲು ಒಪ್ಪಿದೆ. ತಜ್ಞರ ಅಭಿಮತದಂತೆ ಮೈಸೂರಿನಲ್ಲೇ ಸ್ಥಾಪಿಸಲು ತೀರ್ಮಾನಿಸಿರುವುದಾಗಿಯೂ ಸಚಿವ ರವಿ ಹೇಳಿದ್ದಾರೆ.</p>.<p>ತಮಿಳುನಾಡಿನಲ್ಲಿ ತಮಿಳು ಶ್ರೇಷ್ಠತಾ ಕೇಂದ್ರ ಸ್ವಾಯತ್ತವಾಗಿರುವಂತೆ ಇಲ್ಲೂ ಸ್ವಾಯತ್ತ ಕೇಂದ್ರದ ಸ್ಥಾಪನೆ ಆಗಬೇಕು. ಈಗ ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಿಬ್ಬಂದಿ ಮತ್ತು ಮೂಲ ಸೌಕರ್ಯವನ್ನೂ ಕಲ್ಪಿಸಬೇಕಿದೆ.</p>.<p>ಕೇಂದ್ರವು 2004ರಲ್ಲಿ ತಮಿಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡಿದ್ದರೆ, 2005ರಲ್ಲಿ ಸಂಸ್ಕೃತ, 2008ರಲ್ಲಿ ಕನ್ನಡ ಮತ್ತು ತೆಲುಗು, 2013ರಲ್ಲಿ ಮಲಯಾಳ, 2014ರಲ್ಲಿ ಒಡಿಯಾ ಭಾಷೆಗಳಿಗೆ ಈ ಸ್ಥಾನಮಾನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>